ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವವಾಗಿ ಹೆಸರುವಾಗಿಯಾಗಿದೆ. ಈ ದೈವಕ್ಕೆ ಹರಕೆ ಹೇಳಿದರೆ , ಪ್ರಾರ್ಥನೆ ಮಾಡಿದರೆ ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಇದೆ. ಇದೀಗ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರದ ಏರಣಗುಡ್ಡೆ ಎಂಬಲ್ಲಿ ಕೊರಗಜ್ಜ ದೈವಕ್ಕೆ ಪ್ರಾರ್ಥನೆ ಮಾಡಿ ಇರಿಸಿದ್ದ ವೀಳ್ಯದೆಲೆಯಲ್ಲಿ ಬೇರು ಬರುವ ಮೂಲಕ ಅಚ್ಚರಿ ಹಾಗೂ ಕುತೂಹಲದ ಜೊತೆಗೆ ದೈವದ ಮೇಲಿನ ನಂಬಿಕೆ ಇಮ್ಮಡಿಯಾಗಿದೆ.
ಸುಳ್ಯದ ಗುತ್ತಿಗಾರು ಬಳಿಯ ಮೊಗ್ರದ ಮಾತ್ರಮಜಲು ಎಂಬಲ್ಲಿ ಶೀನಪ್ಪ ಎಂಬವರ ಮನೆಯ ವಠಾರದಲ್ಲಿ ಕೊರಗಜ್ಜ ದೈವದ ಕಟ್ಟೆ ಇದೆ. ಇಲ್ಲಿ ಪ್ರತೀ ತಿಂಗಳು ಸಂಕ್ರಮಣದ ದಿನ ಆರಾಧನೆಯಾಗುತ್ತದೆ. ಕಳೆದ ತಿಂಗಳು ಮಗುವಿಗೆ ಅನಾರೋಗ್ಯ ಇದ್ದಾಗ ಸಮೀಪದವರು ಕೊರಗಜ್ಜ ದೈವಕ್ಕೆ ಹರಿಕೆ ಹೇಳಿದ್ದರು. ಈ ಸಂದರ್ಭ ಕೊರಗಜ್ಜನಿಗೆ ಪ್ರಿಯವಾದ ವೀಳ್ಯದೆಲೆ , ಅಡಿಕೆಯನ್ನು ಕಟ್ಟೆಯ ಮೇಲೆ ಇರಿಸಿ ಪ್ರಾರ್ಥನೆ ಮಾಡಿದ್ದರು. ಅದಾಗಿ ಕೆಲವು ದಿನಗಳವರೆಗೂ ಹಸಿರಾಗಿಯೇ ಇದ್ದ ವೀಳ್ಯದೆಲೆ ನಂತರ ಬೇರು ಬರಲು ಆರಂಭಿಸಿತು. ತಕ್ಷಣವೇ ಶೀನಪ್ಪ ಅವರು ದೈವಜ್ಞರ ಮೂಲಕವೂ ತಿಳಿದಾಗ ಸತ್ಯದ ಅರಿವಾಯಿತು. ಮಗು ಆರೋಗ್ಯವಾಗಿರುವುದೂ ತಿಳಿಯಿತು. ಹೀಗಾಗಿ ಅದೇ ವೀಳ್ಯದೆಲೆಯನ್ನು ಈಗ ಹೂಕುಂಡದಲ್ಲಿ ಇರಿಸಿದ್ದಾರೆ. ಈಗಲೂ ವೀಳ್ಯದೆಲೆ ಹಸಿರಾಗಿಯೇ ಇದೆ. ಕಳೆದ ತಿಂಗಳು ಈ ವೀಳ್ಯದೆಲೆಯನ್ನು ಕಟ್ಟೆಯ ಮೇಲೆ ಇರಿಸಲಾಗಿತ್ತು ಎಂದು ಹೇಳುತ್ತಾರೆ ಶೀನಪ್ಪ.
ಕೊರಗಜ್ಜ ದೈವ ತುಳುನಾಡಿನಲ್ಲಿ ಅತ್ಯಂತ ಕಾರಣಿಕ ದೈವ. ನಂಬಿದವರಿಗೆ ಇಂಬು ನೀಡುವ, ಮಾನಸಿಕ ಧೈರ್ಯ ನೀಡುವ ದೈವವಾಗಿ ಆರಾಧನೆಯಾಗುತ್ತಿದೆ. ಅಲ್ಲಲ್ಲಿ ಕೊರಗಜ್ಜನ ಕಟ್ಟೆಗಳು ಇವೆ, ಆರಾಧನೆಗಳು ನಡೆಯುತ್ತವೆ. ಪ್ರತೀ ಕಡೆಯಲ್ಲೂ ಇಂತಹದ್ದೇ ಒಂದೊಂದು ಪವಾಡಗಳು ನಡೆಯುತ್ತವೆ ಎಂದು ಹೇಳುತ್ತಾರೆ ದೈವ ನರ್ತಕ ವಸಂತ ಮೊಗ್ರ.
ವೀಳ್ಯದೆಲೆಯು ಸಾಮಾನ್ಯವಾಗಿ ವಾರದಲ್ಲಿ ಬಾಡಿ ಹೋಗುತ್ತದೆ. ಅಂತಹದ್ದರಲ್ಲಿ ಕೊರಗಜ್ಜನ ಕಟ್ಟೆಯಲ್ಲಿ ಇರಿಸಿರುವ ಈ ವೀಳ್ಯದೆಲೆಯು ಹಸಿರಾಗಿಯೇ ಇದ್ದು ಈಗ ಬೇರು ಮೂಡಿರುವುದು ಭಕ್ತರಿಗೆ ನಂಬಿಕೆಯನ್ನು ಇಮ್ಮಡಿಗೊಳಿಸಿದೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…