Advertisement
ಧಾರ್ಮಿಕ

ತುಳುನಾಡಿನ ದೈವಗಳನ್ನು ಏಕೆ ನಂಬಬೇಕು ? | ದೈವಾರಾಧನೆಗೆ ಇಲ್ಲಿ ಮಹತ್ವ ಏಕಿದೆ? | ಇಲ್ಲಿದೆ ಪ್ರತ್ಯಕ್ಷ ಘಟನೆ |

Share

ತುಳುನಾಡು ಎಂದರೆ ದೈವಗಳ ನಾಡು. ದೈವಾರಾಧನೆಯೇ ಇಲ್ಲಿ ಪ್ರಮುಖ. ಹೀಗಾಗಿ ನಂಬಿದವನಿಗೆ ಇಂಬು ಖಚಿತ ಎಂಬುದು ಹಿಂದಿನಿಂದೂ ನಡೆದುಕೊಂಡಿದೆ ಬಂದಿದೆ. ಅಂತಹ ಪವಿತ್ರ ದೈವೀ ಶಕ್ತಿಗಳ ಪ್ರಕಟೀಕರಣವಾಗಿದೆ. ಮಂಗಳೂರಿನಲ್ಲಿ ಕೊರಗಜ್ಜ ದೈವಸ್ಥಾನ ಅಪವಿತ್ರಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೇ ಕ್ಷೇತ್ರದಲ್ಲಿ ತಪ್ಪೊಪ್ಪಿ ಇದೀಗ ಪೊಲೀಸ್‌ ಇಲಾಖೆಯೂ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಕೊರಗಜ್ಜ ದೈವಸ್ಥಾನ ಇದೆ. ಅತ್ಯಂತ ಕಾರಣಿಕವಾದ ಈ ದೈವಗಳ ಆರಾಧನೆಯೂ ಶ್ರದ್ಧಾ ಭಕ್ತಿಯಿಂದ ಎಲ್ಲೆಡೆ ನಡೆಯುತ್ತದೆ. ಅಂತಹ ದೈವದ ಹುಂಡಿಯನ್ನು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಇದಕ್ಕಾಗಿ ಪೊಲೀಸ್‌ ಇಲಾಖೆಯೂ ಕ್ರಮ ಕೈಗೊಂಡಿತ್ತು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿತ್ತು.ಆದರೆ ಆರೋಪಿ ಪತ್ತೆಯಾಗಲಿಲ್ಲ.

ಇದೀಗ ಎಮ್ಮೆಕೆರೆಯಲ್ಲಿ ನಡೆದ ದೈವಸ್ಥಾನದ ಜಾತ್ರೆಯಲ್ಲಿ ವ್ಯಕ್ತಿಯೊಬ್ಬ ದೈವದ ಮುಂದೆ ಕ್ಷಮೆ ಕೇಳಿದ್ದು , ಎಲ್ಲಾ ಘಟನೆಗಳನ್ನು ವಿವರಿಸಿದ್ದಾನೆ, ಒಬ್ಬ ಮೃತಪಟ್ಟಿದ್ದು ಇನ್ನೊಬ್ಬನ ಆರೋಗ್ಯವೂ ಹದಗೆಟ್ಟಿದೆ ಎಂದೂ ಹೇಳಿದ್ದ.
ಈ ಘಟನೆಯ ಬಳಿಕ ಪೊಲೀಸ್‌ ಇಲಾಖೆ ಮಾಹಿತಿ ಪಡೆದಿದೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಯುತ್ತಿದೆ.

ತುಳುನಾಡಿನ ದೈವ ದೇವರುಗಳು ನಂಬಿಕೆಯ ಪ್ರತೀಕಗಳು. ಹೀಗಾಗಿ ಇಲ್ಲಿ ದೈವಾರಾಧನೆ, ದೇವತಾ ಆರಾಧನೆಗಳಲ್ಲಿ ಎಲ್ಲೂ ಲೋಪಗಳು ನಡೆಯುವುದಿಲ್ಲ, ಮಾತ್ರವಲ್ಲ ಆ ದೈವೀ ಶಕ್ತಿಗಳ ಮುಂದೆ, ನಂಬಿಕೆಗಳ ಮುಂದೆ ಯಾವ ಆಟವೂ ನಡೆಯುವುದಿಲ್ಲ ಎನ್ನುವುದೂ ತಿಳಿಯುತ್ತದೆ ಎಂದು ಭಕ್ತರು ಅಭಿಪ್ರಾಯ ಪಡುತ್ತಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

5 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

16 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

20 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

21 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

23 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

24 hours ago