Advertisement
ಧಾರ್ಮಿಕ

ತುಳುನಾಡಿನ ದೈವಗಳನ್ನು ಏಕೆ ನಂಬಬೇಕು ? | ದೈವಾರಾಧನೆಗೆ ಇಲ್ಲಿ ಮಹತ್ವ ಏಕಿದೆ? | ಇಲ್ಲಿದೆ ಪ್ರತ್ಯಕ್ಷ ಘಟನೆ |

Share

ತುಳುನಾಡು ಎಂದರೆ ದೈವಗಳ ನಾಡು. ದೈವಾರಾಧನೆಯೇ ಇಲ್ಲಿ ಪ್ರಮುಖ. ಹೀಗಾಗಿ ನಂಬಿದವನಿಗೆ ಇಂಬು ಖಚಿತ ಎಂಬುದು ಹಿಂದಿನಿಂದೂ ನಡೆದುಕೊಂಡಿದೆ ಬಂದಿದೆ. ಅಂತಹ ಪವಿತ್ರ ದೈವೀ ಶಕ್ತಿಗಳ ಪ್ರಕಟೀಕರಣವಾಗಿದೆ. ಮಂಗಳೂರಿನಲ್ಲಿ ಕೊರಗಜ್ಜ ದೈವಸ್ಥಾನ ಅಪವಿತ್ರಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೇ ಕ್ಷೇತ್ರದಲ್ಲಿ ತಪ್ಪೊಪ್ಪಿ ಇದೀಗ ಪೊಲೀಸ್‌ ಇಲಾಖೆಯೂ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

Advertisement

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಯ ಹಲವು ಕಡೆಗಳಲ್ಲಿ ಕೊರಗಜ್ಜ ದೈವಸ್ಥಾನ ಇದೆ. ಅತ್ಯಂತ ಕಾರಣಿಕವಾದ ಈ ದೈವಗಳ ಆರಾಧನೆಯೂ ಶ್ರದ್ಧಾ ಭಕ್ತಿಯಿಂದ ಎಲ್ಲೆಡೆ ನಡೆಯುತ್ತದೆ. ಅಂತಹ ದೈವದ ಹುಂಡಿಯನ್ನು ಅಪವಿತ್ರಗೊಳಿಸಿದ ಘಟನೆ ನಡೆದಿತ್ತು. ಇದಕ್ಕಾಗಿ ಪೊಲೀಸ್‌ ಇಲಾಖೆಯೂ ಕ್ರಮ ಕೈಗೊಂಡಿತ್ತು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿತ್ತು.ಆದರೆ ಆರೋಪಿ ಪತ್ತೆಯಾಗಲಿಲ್ಲ.

ಇದೀಗ ಎಮ್ಮೆಕೆರೆಯಲ್ಲಿ ನಡೆದ ದೈವಸ್ಥಾನದ ಜಾತ್ರೆಯಲ್ಲಿ ವ್ಯಕ್ತಿಯೊಬ್ಬ ದೈವದ ಮುಂದೆ ಕ್ಷಮೆ ಕೇಳಿದ್ದು , ಎಲ್ಲಾ ಘಟನೆಗಳನ್ನು ವಿವರಿಸಿದ್ದಾನೆ, ಒಬ್ಬ ಮೃತಪಟ್ಟಿದ್ದು ಇನ್ನೊಬ್ಬನ ಆರೋಗ್ಯವೂ ಹದಗೆಟ್ಟಿದೆ ಎಂದೂ ಹೇಳಿದ್ದ.
ಈ ಘಟನೆಯ ಬಳಿಕ ಪೊಲೀಸ್‌ ಇಲಾಖೆ ಮಾಹಿತಿ ಪಡೆದಿದೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಯುತ್ತಿದೆ.

ತುಳುನಾಡಿನ ದೈವ ದೇವರುಗಳು ನಂಬಿಕೆಯ ಪ್ರತೀಕಗಳು. ಹೀಗಾಗಿ ಇಲ್ಲಿ ದೈವಾರಾಧನೆ, ದೇವತಾ ಆರಾಧನೆಗಳಲ್ಲಿ ಎಲ್ಲೂ ಲೋಪಗಳು ನಡೆಯುವುದಿಲ್ಲ, ಮಾತ್ರವಲ್ಲ ಆ ದೈವೀ ಶಕ್ತಿಗಳ ಮುಂದೆ, ನಂಬಿಕೆಗಳ ಮುಂದೆ ಯಾವ ಆಟವೂ ನಡೆಯುವುದಿಲ್ಲ ಎನ್ನುವುದೂ ತಿಳಿಯುತ್ತದೆ ಎಂದು ಭಕ್ತರು ಅಭಿಪ್ರಾಯ ಪಡುತ್ತಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

4 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

18 hours ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

18 hours ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

1 day ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

1 day ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

2 days ago