ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ: ಸಾಕ್ಷಿ ಕೂಡಾ ಇದೆ ಎಂದ ಡಿಕೆಶಿ

April 22, 2023
10:35 PM

ಚುನಾವಣಾ ಹೊಸ್ತಿಲಲ್ಲಿ ದಿನ ಬೆಳಗಾದಂತೆ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ನಡುವೆ ರಾಜಕೀಯ ನಾಯಕರ ವಾಗ್ದಾಳಿ ಎಗ್ಗಿಲ್ಲದೆ ಸಾಗಿದ್ದು, ಹೊಸ ವಿಚಾರಗಳು ಬಯಲಾಗಲಾರಂಭಿಸಿವೆ. ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಡಿರುವ ಆರೋಪ ಭಾರೀ ಸಂಚಲನ ಮೂಡಿಸಿದೆ.

Advertisement

ಡಿಕೆ ಶಿವಕುಮಾರ್ ತಮ್ಮ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಕಲ್ಯಾಣ ಕರ್ನಾಟಕದ ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಮಾತನಾಡಿದ ಡಿಕೆಶಿ ಕಾಂಗ್ರೆಸ್ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬರುತ್ತಿದ್ದಾರೆ. ಯಾರ್ಯಾರು ಪಕ್ಷಕ್ಕೆ ಸೇರ್ಪಡೆ ಆಗುವವರಿದ್ದಾರೋ ಅವರು ಆಯಾ ಜಿಲ್ಲೆಯಲ್ಲಿ ಸೇರ್ಪಡೆ ಆಗಲು ಸೂಚಿಸಿದ್ದೇನೆ. ಇವತ್ತು ಬಿಜೆಪಿಯಿಂದ ಅರವಿಂದ್ ಚೌಹಾಣ್, ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾರ್ ಸೇರಿದಂತೆ ಹಲವಾರು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಪ್ರಿಯಾಂಕ್​ ಖರ್ಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೂ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗಂಭೀರ ಆರೋಪ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ. ಬಿಜೆಪಿ ನಾಯಕರ ಜೊತೆ ಸೇರ್ಕೊಂಡು ಬಿಎಸ್ ವೈ ಮುಗಿಸಲು ಮುಂದಾಗಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಸಾಕ್ಷಿ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೈ ನಾಯಕ ನನ್ನ ಮೇಲಿನ ಆರೋಪದ ಬಗ್ಗೆ ಶೋಭಾ ಸಾಕ್ಷಿ ಕೊಡಲಿ, ಕೂಡಲೇ ನಾನು ಯಡಿಯೂರಪ್ಪ ಮುಗಿಸೋಕೆ ಅವರು ಹೊರಟಿರುವುದಕ್ಕೆ ಸಾಕ್ಷಿ ಕೊಡುತ್ತೇನೆ ಎಂದಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ
ಕೊಟ್ಟಿಗೆಯಲಿ ತುಂಬಿ ತುಳುಕುವ ಹಸು ಕರುಗಳು : ವೃದ್ಧಾಪ್ಯದಲ್ಲೂ ಮಲೆನಾಡು ಗಿಡ್ಡ ತಳಿ ಹಸು ಸಾಕುತ್ತಿರುವ ಅಜ್ಜಿ : ಬತ್ತದ ಜೀವನ ಉತ್ಸಾಹ
May 5, 2024
8:45 PM
by: The Rural Mirror ಸುದ್ದಿಜಾಲ
ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಳಗೊಂಡ ರಬ್ಬರ್‌ ಬಳಕೆ | ಬೆಳೆಗಾರರಿಗೆ ಧಾರಣೆ ಏರಿಕೆಯ ನಿರೀಕ್ಷೆ |
March 25, 2024
11:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group