Categories: Uncategorized

ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ: ಸಾಕ್ಷಿ ಕೂಡಾ ಇದೆ ಎಂದ ಡಿಕೆಶಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚುನಾವಣಾ ಹೊಸ್ತಿಲಲ್ಲಿ ದಿನ ಬೆಳಗಾದಂತೆ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ನಡುವೆ ರಾಜಕೀಯ ನಾಯಕರ ವಾಗ್ದಾಳಿ ಎಗ್ಗಿಲ್ಲದೆ ಸಾಗಿದ್ದು, ಹೊಸ ವಿಚಾರಗಳು ಬಯಲಾಗಲಾರಂಭಿಸಿವೆ. ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಡಿರುವ ಆರೋಪ ಭಾರೀ ಸಂಚಲನ ಮೂಡಿಸಿದೆ.

Advertisement

ಡಿಕೆ ಶಿವಕುಮಾರ್ ತಮ್ಮ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಕಲ್ಯಾಣ ಕರ್ನಾಟಕದ ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಮಾತನಾಡಿದ ಡಿಕೆಶಿ ಕಾಂಗ್ರೆಸ್ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬರುತ್ತಿದ್ದಾರೆ. ಯಾರ್ಯಾರು ಪಕ್ಷಕ್ಕೆ ಸೇರ್ಪಡೆ ಆಗುವವರಿದ್ದಾರೋ ಅವರು ಆಯಾ ಜಿಲ್ಲೆಯಲ್ಲಿ ಸೇರ್ಪಡೆ ಆಗಲು ಸೂಚಿಸಿದ್ದೇನೆ. ಇವತ್ತು ಬಿಜೆಪಿಯಿಂದ ಅರವಿಂದ್ ಚೌಹಾಣ್, ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾರ್ ಸೇರಿದಂತೆ ಹಲವಾರು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಪ್ರಿಯಾಂಕ್​ ಖರ್ಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೂ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗಂಭೀರ ಆರೋಪ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ. ಬಿಜೆಪಿ ನಾಯಕರ ಜೊತೆ ಸೇರ್ಕೊಂಡು ಬಿಎಸ್ ವೈ ಮುಗಿಸಲು ಮುಂದಾಗಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಸಾಕ್ಷಿ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೈ ನಾಯಕ ನನ್ನ ಮೇಲಿನ ಆರೋಪದ ಬಗ್ಗೆ ಶೋಭಾ ಸಾಕ್ಷಿ ಕೊಡಲಿ, ಕೂಡಲೇ ನಾನು ಯಡಿಯೂರಪ್ಪ ಮುಗಿಸೋಕೆ ಅವರು ಹೊರಟಿರುವುದಕ್ಕೆ ಸಾಕ್ಷಿ ಕೊಡುತ್ತೇನೆ ಎಂದಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಿಕ್ಕಬಳ್ಳಾಪುರ ಜಿಲ್ಲೆ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ 2863 ಎಕರೆ ಭೂಮಿ

ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಬಳಿ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ೨…

41 minutes ago

ಹೊಸರುಚಿ | ಹಲಸಿನ ಕಾಯಿ ಪೂರಿ

ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1…

2 hours ago

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

13 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

13 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

20 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

1 day ago