ಚುನಾವಣಾ ಹೊಸ್ತಿಲಲ್ಲಿ ದಿನ ಬೆಳಗಾದಂತೆ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ನಡುವೆ ರಾಜಕೀಯ ನಾಯಕರ ವಾಗ್ದಾಳಿ ಎಗ್ಗಿಲ್ಲದೆ ಸಾಗಿದ್ದು, ಹೊಸ ವಿಚಾರಗಳು ಬಯಲಾಗಲಾರಂಭಿಸಿವೆ. ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಡಿರುವ ಆರೋಪ ಭಾರೀ ಸಂಚಲನ ಮೂಡಿಸಿದೆ.
ಡಿಕೆ ಶಿವಕುಮಾರ್ ತಮ್ಮ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಕಲ್ಯಾಣ ಕರ್ನಾಟಕದ ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಮಾತನಾಡಿದ ಡಿಕೆಶಿ ಕಾಂಗ್ರೆಸ್ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬರುತ್ತಿದ್ದಾರೆ. ಯಾರ್ಯಾರು ಪಕ್ಷಕ್ಕೆ ಸೇರ್ಪಡೆ ಆಗುವವರಿದ್ದಾರೋ ಅವರು ಆಯಾ ಜಿಲ್ಲೆಯಲ್ಲಿ ಸೇರ್ಪಡೆ ಆಗಲು ಸೂಚಿಸಿದ್ದೇನೆ. ಇವತ್ತು ಬಿಜೆಪಿಯಿಂದ ಅರವಿಂದ್ ಚೌಹಾಣ್, ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾರ್ ಸೇರಿದಂತೆ ಹಲವಾರು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೂ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗಂಭೀರ ಆರೋಪ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ. ಬಿಜೆಪಿ ನಾಯಕರ ಜೊತೆ ಸೇರ್ಕೊಂಡು ಬಿಎಸ್ ವೈ ಮುಗಿಸಲು ಮುಂದಾಗಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಸಾಕ್ಷಿ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೈ ನಾಯಕ ನನ್ನ ಮೇಲಿನ ಆರೋಪದ ಬಗ್ಗೆ ಶೋಭಾ ಸಾಕ್ಷಿ ಕೊಡಲಿ, ಕೂಡಲೇ ನಾನು ಯಡಿಯೂರಪ್ಪ ಮುಗಿಸೋಕೆ ಅವರು ಹೊರಟಿರುವುದಕ್ಕೆ ಸಾಕ್ಷಿ ಕೊಡುತ್ತೇನೆ ಎಂದಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…