ಚುನಾವಣಾ ಹೊಸ್ತಿಲಲ್ಲಿ ದಿನ ಬೆಳಗಾದಂತೆ ಹೊಸ ಬೆಳವಣಿಗೆಗಳು ಕಂಡು ಬರುತ್ತಿವೆ. ಈ ನಡುವೆ ರಾಜಕೀಯ ನಾಯಕರ ವಾಗ್ದಾಳಿ ಎಗ್ಗಿಲ್ಲದೆ ಸಾಗಿದ್ದು, ಹೊಸ ವಿಚಾರಗಳು ಬಯಲಾಗಲಾರಂಭಿಸಿವೆ. ಸದ್ಯ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ನೀಡಿರುವ ಹೇಳಿಕೆ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಮಾಡಿರುವ ಆರೋಪ ಭಾರೀ ಸಂಚಲನ ಮೂಡಿಸಿದೆ.
ಡಿಕೆ ಶಿವಕುಮಾರ್ ತಮ್ಮ ಸದಾಶಿವನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ಆಯೋಜಿಸಿದ್ದರು. ಈ ವೇಳೆ ಕಲ್ಯಾಣ ಕರ್ನಾಟಕದ ಅನೇಕ ನಾಯಕರು ಕಾಂಗ್ರೆಸ್ ಸೇರ್ಪಡೆ ಆಗುವ ಬಗ್ಗೆ ಮಾತನಾಡಿದ ಡಿಕೆಶಿ ಕಾಂಗ್ರೆಸ್ ಸಿದ್ದಾಂತ ಒಪ್ಪಿ ಪಕ್ಷಕ್ಕೆ ಬರುತ್ತಿದ್ದಾರೆ. ಯಾರ್ಯಾರು ಪಕ್ಷಕ್ಕೆ ಸೇರ್ಪಡೆ ಆಗುವವರಿದ್ದಾರೋ ಅವರು ಆಯಾ ಜಿಲ್ಲೆಯಲ್ಲಿ ಸೇರ್ಪಡೆ ಆಗಲು ಸೂಚಿಸಿದ್ದೇನೆ. ಇವತ್ತು ಬಿಜೆಪಿಯಿಂದ ಅರವಿಂದ್ ಚೌಹಾಣ್, ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾರ್ ಸೇರಿದಂತೆ ಹಲವಾರು ಮಂದಿ ಸೇರ್ಪಡೆಯಾಗುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೂ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಗಂಭೀರ ಆರೋಪ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಯಡಿಯೂರಪ್ಪ ಮುಗಿಸಲು ಶೋಭಾ ಮುಂದಾಗಿದ್ದಾರೆ. ಬಿಜೆಪಿ ನಾಯಕರ ಜೊತೆ ಸೇರ್ಕೊಂಡು ಬಿಎಸ್ ವೈ ಮುಗಿಸಲು ಮುಂದಾಗಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಸಾಕ್ಷಿ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಕೈ ನಾಯಕ ನನ್ನ ಮೇಲಿನ ಆರೋಪದ ಬಗ್ಗೆ ಶೋಭಾ ಸಾಕ್ಷಿ ಕೊಡಲಿ, ಕೂಡಲೇ ನಾನು ಯಡಿಯೂರಪ್ಪ ಮುಗಿಸೋಕೆ ಅವರು ಹೊರಟಿರುವುದಕ್ಕೆ ಸಾಕ್ಷಿ ಕೊಡುತ್ತೇನೆ ಎಂದಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…