Advertisement
ಸುದ್ದಿಗಳು

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯ್ಕೆಯಾದ ಶವಾದ್ ಗೂನಡ್ಕರವರಿಗೆ ಹುಟ್ಟೂರ ಸನ್ಮಾನ

Share

ಅತೀ ಕಿರಿಯ ವಯಸ್ಸಿನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರಿಂದ ನೇಮಕಗೊಂಡ ವಿದ್ಯಾರ್ಥಿ ನಾಯಕ ಶೌವಾದ್ ಗೂನಡ್ಕರವರಿಗೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಹುಟ್ಟೂರ ಸನ್ಮಾನ ಜರುಗಿತು.

Advertisement
Advertisement
Advertisement
Advertisement

ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರು ಗೂನಡ್ಕ ನಾಗರಿಕರ ಪರವಾಗಿ ಶೌವಾದ್ ಗೂನಡ್ಕರವರನ್ನು ಸಮ್ಮಾನಿಸಿ ಗೌರವಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶೌವಾದ್ ಗೂನಡ್ಕರವರು “ನನ್ನ ಹುಟ್ಟೂರಿನ ಜನರ ಪ್ರೀತಿ, ವಿಶ್ವಾಸ ಹಾಗೂ ಆದರಕ್ಕೆ ನಾನು ಆಭಾರಿಯಾಗಿದ್ದೇನೆ. ನನ್ನೂರಿನ ಜನರ ಸಮಸ್ಯೆಗಳಿಗೆ ಮಂಗಳೂರಿನಲ್ಲಿದ್ದುಕೊಂಡು ನಾನು ಸದಾ ಸ್ಪಂದಿಸಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಪ್ರಾರ್ಥನೆಯ ಫಲವಾಗಿ ಇಂದು ಕಿರಿಯ ವಯಸ್ಸಿನಲ್ಲೇ ನನ್ನನ್ನು ಗುರುತಿಸಿ ಡಿ.ಕೆ.ಶಿವಕುಮಾರ್ ರವರು ಈ ಮಹತ್ವದ ಜವಬ್ದಾರಿಯನ್ನು ನೀಡಿದ್ದಾರೆ” ಎಂದು ಹೇಳಿದರು.

Advertisement

ಕರ್ನಾಟಕ ರಾಜ್ಯ ಕಾರ್ಮಿಕರ ಫೆಡರೇಶನ್, ಸುಳ್ಯ ಇದರ ಗೌರವಾಧ್ಯಕ್ಷರಾದ ಕೆ.ಪಿ.ಜಾನಿಯವರು ಅಭಿನಂದನಾ ಭಾಷಣ ಮಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಜಗದೀಶ್ ರೈ, ಮಹಮ್ಮದ್ ಕುಂಞ ಗೂನಡ್ಕ, ಜಿ.ಕೆ.ಹಮೀದ್, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರುಗಳಾದ ಮೋಹಿನಿ ವಸಂತ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಆಶಾ ವಿನಯ್ ಕುಮಾರ್, ಮುಖಂಡರುಗಳಾದ ದಿನಕರ್ ಗೌಡ ಸಣ್ಣಮನೆ, ತಾಜ್ ಮಹಮ್ಮದ್, ವಸಂತ ಗೌಡ ಪೆಲ್ತಡ್ಕ, ಎಸ್.ಕೆ.ಹನೀಫ್, ಬಾಲಚಂದ್ರ, ವಿನಯ್ ಕುಮಾರ್, ಜಿ.ಜಿ.ನವೀನ, ರಾಜು ನೆಲ್ಲಿಕುಮೇರಿ, ತಾಜುದ್ದೀನ್ ಅರಂತೋಡು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆಯೋಜಕರಾದ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪಿ.ಕೆ.ಅಬೂಸಾಲಿ ಸರ್ವರನ್ನೂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

7 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

10 hours ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

24 hours ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

24 hours ago

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…

24 hours ago

ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ

ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…

24 hours ago