ಸುದ್ದಿಗಳು

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯ್ಕೆಯಾದ ಶವಾದ್ ಗೂನಡ್ಕರವರಿಗೆ ಹುಟ್ಟೂರ ಸನ್ಮಾನ

Share

ಅತೀ ಕಿರಿಯ ವಯಸ್ಸಿನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರಿಂದ ನೇಮಕಗೊಂಡ ವಿದ್ಯಾರ್ಥಿ ನಾಯಕ ಶೌವಾದ್ ಗೂನಡ್ಕರವರಿಗೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಹುಟ್ಟೂರ ಸನ್ಮಾನ ಜರುಗಿತು.

ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರು ಗೂನಡ್ಕ ನಾಗರಿಕರ ಪರವಾಗಿ ಶೌವಾದ್ ಗೂನಡ್ಕರವರನ್ನು ಸಮ್ಮಾನಿಸಿ ಗೌರವಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶೌವಾದ್ ಗೂನಡ್ಕರವರು “ನನ್ನ ಹುಟ್ಟೂರಿನ ಜನರ ಪ್ರೀತಿ, ವಿಶ್ವಾಸ ಹಾಗೂ ಆದರಕ್ಕೆ ನಾನು ಆಭಾರಿಯಾಗಿದ್ದೇನೆ. ನನ್ನೂರಿನ ಜನರ ಸಮಸ್ಯೆಗಳಿಗೆ ಮಂಗಳೂರಿನಲ್ಲಿದ್ದುಕೊಂಡು ನಾನು ಸದಾ ಸ್ಪಂದಿಸಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಪ್ರಾರ್ಥನೆಯ ಫಲವಾಗಿ ಇಂದು ಕಿರಿಯ ವಯಸ್ಸಿನಲ್ಲೇ ನನ್ನನ್ನು ಗುರುತಿಸಿ ಡಿ.ಕೆ.ಶಿವಕುಮಾರ್ ರವರು ಈ ಮಹತ್ವದ ಜವಬ್ದಾರಿಯನ್ನು ನೀಡಿದ್ದಾರೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ಕಾರ್ಮಿಕರ ಫೆಡರೇಶನ್, ಸುಳ್ಯ ಇದರ ಗೌರವಾಧ್ಯಕ್ಷರಾದ ಕೆ.ಪಿ.ಜಾನಿಯವರು ಅಭಿನಂದನಾ ಭಾಷಣ ಮಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಜಗದೀಶ್ ರೈ, ಮಹಮ್ಮದ್ ಕುಂಞ ಗೂನಡ್ಕ, ಜಿ.ಕೆ.ಹಮೀದ್, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರುಗಳಾದ ಮೋಹಿನಿ ವಸಂತ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಆಶಾ ವಿನಯ್ ಕುಮಾರ್, ಮುಖಂಡರುಗಳಾದ ದಿನಕರ್ ಗೌಡ ಸಣ್ಣಮನೆ, ತಾಜ್ ಮಹಮ್ಮದ್, ವಸಂತ ಗೌಡ ಪೆಲ್ತಡ್ಕ, ಎಸ್.ಕೆ.ಹನೀಫ್, ಬಾಲಚಂದ್ರ, ವಿನಯ್ ಕುಮಾರ್, ಜಿ.ಜಿ.ನವೀನ, ರಾಜು ನೆಲ್ಲಿಕುಮೇರಿ, ತಾಜುದ್ದೀನ್ ಅರಂತೋಡು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆಯೋಜಕರಾದ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪಿ.ಕೆ.ಅಬೂಸಾಲಿ ಸರ್ವರನ್ನೂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

17 hours ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

22 hours ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

1 day ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

1 day ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

1 day ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

1 day ago