Advertisement
ಸುದ್ದಿಗಳು

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯ್ಕೆಯಾದ ಶವಾದ್ ಗೂನಡ್ಕರವರಿಗೆ ಹುಟ್ಟೂರ ಸನ್ಮಾನ

Share

ಅತೀ ಕಿರಿಯ ವಯಸ್ಸಿನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರಿಂದ ನೇಮಕಗೊಂಡ ವಿದ್ಯಾರ್ಥಿ ನಾಯಕ ಶೌವಾದ್ ಗೂನಡ್ಕರವರಿಗೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಹುಟ್ಟೂರ ಸನ್ಮಾನ ಜರುಗಿತು.

ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರು ಗೂನಡ್ಕ ನಾಗರಿಕರ ಪರವಾಗಿ ಶೌವಾದ್ ಗೂನಡ್ಕರವರನ್ನು ಸಮ್ಮಾನಿಸಿ ಗೌರವಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶೌವಾದ್ ಗೂನಡ್ಕರವರು “ನನ್ನ ಹುಟ್ಟೂರಿನ ಜನರ ಪ್ರೀತಿ, ವಿಶ್ವಾಸ ಹಾಗೂ ಆದರಕ್ಕೆ ನಾನು ಆಭಾರಿಯಾಗಿದ್ದೇನೆ. ನನ್ನೂರಿನ ಜನರ ಸಮಸ್ಯೆಗಳಿಗೆ ಮಂಗಳೂರಿನಲ್ಲಿದ್ದುಕೊಂಡು ನಾನು ಸದಾ ಸ್ಪಂದಿಸಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಪ್ರಾರ್ಥನೆಯ ಫಲವಾಗಿ ಇಂದು ಕಿರಿಯ ವಯಸ್ಸಿನಲ್ಲೇ ನನ್ನನ್ನು ಗುರುತಿಸಿ ಡಿ.ಕೆ.ಶಿವಕುಮಾರ್ ರವರು ಈ ಮಹತ್ವದ ಜವಬ್ದಾರಿಯನ್ನು ನೀಡಿದ್ದಾರೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ಕಾರ್ಮಿಕರ ಫೆಡರೇಶನ್, ಸುಳ್ಯ ಇದರ ಗೌರವಾಧ್ಯಕ್ಷರಾದ ಕೆ.ಪಿ.ಜಾನಿಯವರು ಅಭಿನಂದನಾ ಭಾಷಣ ಮಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಜಗದೀಶ್ ರೈ, ಮಹಮ್ಮದ್ ಕುಂಞ ಗೂನಡ್ಕ, ಜಿ.ಕೆ.ಹಮೀದ್, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರುಗಳಾದ ಮೋಹಿನಿ ವಸಂತ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಆಶಾ ವಿನಯ್ ಕುಮಾರ್, ಮುಖಂಡರುಗಳಾದ ದಿನಕರ್ ಗೌಡ ಸಣ್ಣಮನೆ, ತಾಜ್ ಮಹಮ್ಮದ್, ವಸಂತ ಗೌಡ ಪೆಲ್ತಡ್ಕ, ಎಸ್.ಕೆ.ಹನೀಫ್, ಬಾಲಚಂದ್ರ, ವಿನಯ್ ಕುಮಾರ್, ಜಿ.ಜಿ.ನವೀನ, ರಾಜು ನೆಲ್ಲಿಕುಮೇರಿ, ತಾಜುದ್ದೀನ್ ಅರಂತೋಡು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆಯೋಜಕರಾದ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪಿ.ಕೆ.ಅಬೂಸಾಲಿ ಸರ್ವರನ್ನೂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago