Advertisement
ಸುದ್ದಿಗಳು

ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಆಯ್ಕೆಯಾದ ಶವಾದ್ ಗೂನಡ್ಕರವರಿಗೆ ಹುಟ್ಟೂರ ಸನ್ಮಾನ

Share

ಅತೀ ಕಿರಿಯ ವಯಸ್ಸಿನಲ್ಲೇ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರರಾಗಿ ಕೆ.ಪಿ.ಸಿ.ಸಿ.ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರಿಂದ ನೇಮಕಗೊಂಡ ವಿದ್ಯಾರ್ಥಿ ನಾಯಕ ಶೌವಾದ್ ಗೂನಡ್ಕರವರಿಗೆ ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಹುಟ್ಟೂರ ಸನ್ಮಾನ ಜರುಗಿತು.

ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸೋಮಶೇಖರ್ ಕೊಯಂಗಾಜೆಯವರು ಗೂನಡ್ಕ ನಾಗರಿಕರ ಪರವಾಗಿ ಶೌವಾದ್ ಗೂನಡ್ಕರವರನ್ನು ಸಮ್ಮಾನಿಸಿ ಗೌರವಿಸಿದರು. ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಶೌವಾದ್ ಗೂನಡ್ಕರವರು “ನನ್ನ ಹುಟ್ಟೂರಿನ ಜನರ ಪ್ರೀತಿ, ವಿಶ್ವಾಸ ಹಾಗೂ ಆದರಕ್ಕೆ ನಾನು ಆಭಾರಿಯಾಗಿದ್ದೇನೆ. ನನ್ನೂರಿನ ಜನರ ಸಮಸ್ಯೆಗಳಿಗೆ ಮಂಗಳೂರಿನಲ್ಲಿದ್ದುಕೊಂಡು ನಾನು ಸದಾ ಸ್ಪಂದಿಸಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ, ಪ್ರಾರ್ಥನೆಯ ಫಲವಾಗಿ ಇಂದು ಕಿರಿಯ ವಯಸ್ಸಿನಲ್ಲೇ ನನ್ನನ್ನು ಗುರುತಿಸಿ ಡಿ.ಕೆ.ಶಿವಕುಮಾರ್ ರವರು ಈ ಮಹತ್ವದ ಜವಬ್ದಾರಿಯನ್ನು ನೀಡಿದ್ದಾರೆ” ಎಂದು ಹೇಳಿದರು.

ಕರ್ನಾಟಕ ರಾಜ್ಯ ಕಾರ್ಮಿಕರ ಫೆಡರೇಶನ್, ಸುಳ್ಯ ಇದರ ಗೌರವಾಧ್ಯಕ್ಷರಾದ ಕೆ.ಪಿ.ಜಾನಿಯವರು ಅಭಿನಂದನಾ ಭಾಷಣ ಮಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಜಗದೀಶ್ ರೈ, ಮಹಮ್ಮದ್ ಕುಂಞ ಗೂನಡ್ಕ, ಜಿ.ಕೆ.ಹಮೀದ್, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರುಗಳಾದ ಮೋಹಿನಿ ವಸಂತ ಗೌಡ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಆಶಾ ವಿನಯ್ ಕುಮಾರ್, ಮುಖಂಡರುಗಳಾದ ದಿನಕರ್ ಗೌಡ ಸಣ್ಣಮನೆ, ತಾಜ್ ಮಹಮ್ಮದ್, ವಸಂತ ಗೌಡ ಪೆಲ್ತಡ್ಕ, ಎಸ್.ಕೆ.ಹನೀಫ್, ಬಾಲಚಂದ್ರ, ವಿನಯ್ ಕುಮಾರ್, ಜಿ.ಜಿ.ನವೀನ, ರಾಜು ನೆಲ್ಲಿಕುಮೇರಿ, ತಾಜುದ್ದೀನ್ ಅರಂತೋಡು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆಯೋಜಕರಾದ ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಪಿ.ಕೆ.ಅಬೂಸಾಲಿ ಸರ್ವರನ್ನೂ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

4 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

6 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

7 hours ago

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago