Advertisement
MIRROR FOCUS

ಕೃಷಿ ಎಂದರೆ ಖುಷಿ

Share

ಅದು ದೇಶವೆಲ್ಲಾ ಲಾಕ್‍ಡೌನ್ ಸರಪಳಿಯಲ್ಲಿ ಬಂಧಿಯಾದ ದಿನಗಳು. ದುಬೈಯಲ್ಲಿ ನೆಲೆಸಿರುವ ಗೆಳತಿ ವಾಟ್ಸಾಪ್‍ಲ್ಲಿ ಮಾತಿಗೆ ಸಿಕ್ಕಿದ್ದಳು. ಅಲ್ಲಿಯ ಸ್ಥಿತಿ ಗತಿ, ಇಲ್ಲಿಯ ವಾತಾವರಣ ಹೀಗೆ ಕುಶಲೋಪಚಾರಗಳ ವಿನಿಮಮಯಗಳ ನಂತರ “ಕೊರೋನಾದಿಂದಾಗಿ ಊರಿಗೆ ಬರಲು ಸಾಧ್ಯವಿಲ್ಲ. ನೀನಂತು ದುಬೈ ಲೈಫ್‍ಗೆ ಗುಡ್ ಬೈ ಹೇಳಿ ಹಳ್ಳಿ ಜೀವನಕ್ಕೆ ಮರಳಿ ಗೆದ್ದುಬಿಟ್ಟೆ” ಅಂದಳು.

ಎಂದೂ ಫಾರಿನ್ ಕನಸು ಕಾಣದವಳಿಗೆ ವಿವಾಹವಾಗಿ ಪತಿಯೊಡನೆ ದುಬೈಯಲ್ಲಿ ನೆಲೆಸುವ ಸುಯೋಗ ಒದಗಿ ಬಂದಿತ್ತು. ಬರೋಬ್ಬರಿ ಆರು ವರ್ಷಗಳ ಕಾಲ ದುಬೈ ಜೀವನ. ಹಳ್ಳಿಯ ಪರಿಶುದ್ಧವಾದ ವಾತಾವರಣದಲ್ಲಿ ಹುಟ್ಟಿ ಬೆಳೆದವಳಾದರೂ ಪತಿಯ ಸಹಕಾರದಿಂದ ಮರುಭೂಮಿಯಲ್ಲಿ ಅರಳಿದ ಹೊಸಜೀವನಕ್ಕೆ ಒಗ್ಗಲು ಕಷ್ಟವೇನು ಆಗಲಿಲ್ಲ. ಯು.ಎ.ಇ.ಯ ಎಲ್ಲಾ ಪ್ರಸಿದ್ಧ ಜಾಗಗಳನ್ನು ಸುತ್ತಾಡಿದ್ದು, ಸ್ನೇಹಿತರೆಲ್ಲಾ ಸೇರಿ ಮಾಡುತ್ತಿದ್ದಗೆಟ್ ಟುಗೆದರ್‍ಗಳ ಸವಿ ಕ್ಷಣಗಳು ಈಗ ಕನಸಿನಂತೆ ಭಾಸವಾಗುತ್ತಿದೆ.

ಪತಿ ಆಫೀಸ್ ಕೆಲಸಕ್ಕೆ ರಿಸೈನ್‍ ಕೊಟ್ಟಾಗ ಸ್ನೇಹಿತರು, ಕುಟಂಬದ ಆತ್ಮೀಯರದ್ದೆಲ್ಲಾ ಒಂದೇ ಸಜೆಷನ್ “ಯು.ಎ.ಇಯ ಸರಕಾರಿ ಉದ್ಯೋಗವನ್ನು ಬಿಟ್ಟು ಕೃಷಿಗೆ ಹೋಗಿ ಕಷ್ಟ ಪಡುತ್ತೀಯಲ್ಲಾ ಮಾರಾಯಾ..ದಿರ್ಹಾಂನಲ್ಲಿ ಸಂಬಳ ಎಣಿಸುತ್ತಾ ಆರಾಮದಲ್ಲಿರು. ನಮ್ಮಂತೆ ಕೃಷಿಯ ಕಷ್ಟಕ್ಕೆ ಸಿಲುಕಬೇಡ” ಎಂದು. ಆದರೆ ಹೊರ ಪ್ರಪಂಚದ ಅನುಭವಕ್ಕಾಗಿ ದುಡಿದಾಗಿದೆ. ಒಂದು ಸಂಸಾರಕ್ಕೆ ಆರಾಮವಾಗಿ ಜೀವನ ಸಾಗಿಸಲು ಬೇಕಾಗುವಷ್ಟು ಭೂಮಿ ಇದೆ. ನಮ್ಮಇತಿಮಿತಿಗಳಿಗೆ ನಾವೇ ಚೌಕಟ್ಟು ಹಾಕಬೇಕೆನ್ನುವ ಪತಿ. ಕೊನೆಗೂ ಇಬ್ಬರೂ ಗಟ್ಟಿ ನಿರ್ಧಾರ ಮಾಡಿ ಮೊದಲೇ ನಿರ್ಧರಿಸಿದಂತೆ ಮಗಳ ಶಾಲಾ ಜೀವನದ ಪ್ರಾರಂಭದ ಸಮಯದಲ್ಲಿ ಹಳ್ಳಿಗೆ ಬಂದು ಅತ್ತೆ ಮಾವನವರು ಮಾಡುತ್ತಿದ್ದ ಕೃಷಿ ಕಾಯಕಕ್ಕೆ ಕೈ ಜೋಡಿಸಿದೆವು.
ಅಂದ ಹಾಗೆ ಪತಿಯಲ್ಲಿದ್ದಆತ್ಮ ವಿಶ್ವಾಸ ಊರಿಗೆ ಬರುವಾಗ ನನ್ನಲ್ಲಿರಲಿಲ್ಲ. ಕೃಷಿ ಕೆಲಸಗಳು ನಮಗೆ ಒಗ್ಗಬಹುದೇ? ಹವಾಮಾನ ವೈಪರೀತ್ಯ, ಕೂಲಿ ಕಾರ್ಮಿಕರ ಸಮಸ್ಯೆ, ಬೆಳೆದ ಬೆಳೆಗಳಿಗೆ ಕಾಡುಪ್ರಾಣಿಗಳ ಉಪಟಳ ಇವೆಲ್ಲವುದರ ಮಧ್ಯೆ ಕೃಷಿ ಕೈ ಹಿಡೀದೀತೇ ಎನ್ನುವ ಗೊಂದಲ..ಹೀಗೆ ದುಬೈಯಲ್ಲಿ ಸಂಜೆಯ ಎಷ್ಟೋ ವಾಕಿಂಗ್‍ಗಳಲ್ಲಿ ನಮ್ಮ ಮಾತುಕತೆ ಇದರ ಕುರಿತೇ ನಡೆಯುತಿತ್ತು. ಆಗೆಲ್ಲಾ ಪತಿ ಹೇಳುತ್ತಿದ್ದುದು “ನನ್ನಜೊತೆ ಬಾ. ನಾನಿದ್ದೇನೆ ” ಎನ್ನುವ ಧೈರ್ಯ ತುಂಬಿದ ಮಾತು ನನ್ನ ಮನಸ್ಸನ್ನು ಗಟ್ಟಿ ಮಾಡುತ್ತಿತ್ತು.

ಇದಕ್ಕೆ ಕಾರಣವೂ ಇದೆ. ನನ್ನ ತವರು ಮನೆ ಕೃಷಿ ಕುಟುಂಬವೇ. ಅಪ್ಪಅಮ್ಮ ಮಾಡುವ ಕೆಲಸಗಳನ್ನು ನೋಡಿ ಕೃಷಿ ಕೆಲಸಗಳ ದೈಹಿಕ ಶ್ರಮದ ಅರಿವಿತ್ತು. ಅಪರೂಪಕ್ಕೆ ತೋಟದ ಕಡೆ ಹೋಗುತ್ತಿದ್ದೆ ಹೊರತು ಪೂರ್ಣ ಪ್ರಮಾಣದ ಅರಿವಿರಲಿಲ್ಲ. ಆದರೆ ನಮ್ಮ ಮನೆಯಲ್ಲಿ ಹಸುಗಳಿಗೆ ಹುಲ್ಲು ಮಾಡುವುದು, ಅಡಿಕೆ ಹೆಕ್ಕುವುದು, ಕೊಕ್ಕೋ ಕೀಳುವುದು, ಗಿಡಗಳಿಗೆ ಗೊಬ್ಬರ ಹಾಕುವುದು, ಅಡಿಕೆ ಸಿಪ್ಪೆ ತೆಗೆಯುವುದು ಮುಂತಾದ ಕೆಲಸಗಳನ್ನು ಅತ್ತೆ ಮಾವ ಮಾಡುತ್ತಿದ್ದರು. ದೈನಂದಿನ ಕೆಲಸಗಳಿಗೆ ಕೆಲಸಗಾರರನ್ನು ಅವಲಂಬಿಸುವುದು ಬಹು ಕಡಿಮೆ. ಇಂತಹ ದೈಹಿಕ ಶ್ರಮದ ಕೆಲಸಗಳನ್ನು ನಾನು ಮಾಡಲು ಸಾಧ್ಯವೇ ಎನ್ನುವ ಗೊಂದಲ ನನ್ನಲ್ಲಿತ್ತು. ಮನಸ್ಸಿದ್ದರೆ ಎಂತಹ ಕೆಲಸಗಳನ್ನು ಯಾರು ಬೇಕಾದರೂ ಮಾಡಲು ಸಾಧ್ಯ ಎನ್ನುವುದನ್ನು ಈ ನಾಲ್ಕು ವರ್ಷದ ಹಳ್ಳಿ ಜೀವನ ಕಲಿಸಿಕೊಟ್ಟಿದೆ ಎಂದರೆ ತಪ್ಪಲ್ಲ. ನನ್ನ ಮನೆಯ ವಾತಾವರಣ ನನ್ನನ್ನೂ ಕೃಷಿ ಕೆಲಸಗಳಿಗೆ ಕೈ ಜೋಡಿಸುವಂತೆ ಮಾಡಿತು. ಹಳ್ಳಿಯಲ್ಲಿ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಮುಂಜಾನೆ ಬೇಗ ಏಳುವ ಪರಿಪಾಠ, ದೈಹಿಕವಾಗಿ ಸಿಗುವ ಶ್ರಮದ ಕೆಲಸ ಮಾನಸಿಕವಾಗಿಯೂ ಬ್ಯುಸಿ ಇರುವಂತೆ ನೋಡಿಕೊಳ್ಳುತ್ತದೆ. ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಆಸಕ್ತಿ ಇದ್ದರೆ ಪ್ರತಿದಿನದ ಲವಲವಿಕೆಗೆ ಹಳ್ಳಿಯ ಕೃಷಿ ಚಟುವಟಿಕೆ ಬೂಸ್ಟರ್‍ನಂತೆ ಕಾರ್ಯನಿರ್ವಹಿಸುತ್ತದೆ ಎನ್ನುವುದು ಅಕ್ಷರಷಃ ಸತ್ಯ.

 

-ವಂದನಾರವಿ ಕೆ.ವೈ.ವೇಣೂರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

6 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

7 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

8 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

9 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

21 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

21 hours ago