Advertisement
ಅನುಕ್ರಮ

ಕೃಷಿಮಾತು | ಕೃಷಿಯಲ್ಲಿ “ವಿಷ” ವಾದ | ನಮ್ಮ ಕಣ್ಣೆದುರಲ್ಲೇ ನಾಶವಾದ ಜೀವ ಸಂತಾನಗಳು ಎಷ್ಟು ? | ಕೃಷಿಕ ಎ ಪಿ ಸದಾಶಿವ ತೆರೆದಿಟ್ಟ ಸತ್ಯ |

Share

ಕೆಲದಿನಗಳ ಹಿಂದೆ ಸಂಜೆಯ ಹೊತ್ತು ಗದ್ದೆಯ ಬದಿಗೆ ಹೋಗಿದ್ದೆ. ಸ್ಥಳೀಯರೊಬ್ಬರು ಹಡಿಲು ಬಿದ್ದ ಗದ್ದೆಯನ್ನು ವೀಕ್ಷಿಸುತ್ತಿದ್ದರು. ನನ್ನನ್ನು ಕಂಡೊಡನೆ ನಮಸ್ಕಾರಗಳ ವಿನಿಮಯದೊಂದಿಗೆ, ಈ ವರ್ಷ ಗದ್ದೆ ಬೇಸಾಯ ಮಾಡಿದರೆ ಹೇಗೆ?ಎಂದು ಆಲೋಚಿಸುತ್ತಿದ್ದೇನೆ ಅಂದರು. ಮನೆಯಲ್ಲಿ ಕುಳಿತು ಕುಳಿತು ಬೇಸರವಾಗುತ್ತಿದೆ, ಮನಸ್ಸಿನ ನೋವು ಪರಿಹಾರವಾಗಲು ಗದ್ದೆ ಬೇಸಾಯ ಸಹಾಯಕವಾಗಬಹುದು ಎನ್ನುವ ದೃಷ್ಟಿಯಿಂದ ಆಲೋಚನೆ ಬಂತು ಅಂತಂದರು.

ಮನಸ್ಸಿನ ನೋವು,ಗದ್ದೆ ಬೇಸಾಯ ಈ ಎರಡು ವಿಷಯಗಳು ನನಗೇಕೋ ಕುತೂಹಲವುಂಟಾಯಿತು. ಅವರು ಮುಂದುವರಿದು ಹೇಳಿದ ವಿಷಯ ಮಾತ್ರ ತುಂಬಾ ಆಘಾತಕಾರಿ ಮತ್ತು ಸರ್ವರಿಗೂ ಎಚ್ಚರಿಕೆಯ ಗಂಟೆ ಎಂದು ನನ್ನ ಮನಸ್ಸಿಗೆ ಅರಿವಾಯಿತು.

ಇನ್ನೂ ಚಿಕ್ಕಪ್ರಾಯದ ಮಗಳು, ಮದುವೆಯಾಗಿ ವರುಷ ಎರಡಾಯಿತು. ಆಗಾಗ ಬಂದ ಅಸೌಖ್ಯದ ಕಾರಣದಿಂದ ಆಸ್ಪತ್ರೆಗೆ ಭೇಟಿ ನೀಡಿತು. ಆಧುನಿಕ ಪರೀಕ್ಷೆಗಳ ಮೂಲಕ ಗರ್ಭಕೋಶದಲ್ಲಿ ಕ್ಯಾನ್ಸರ್ ಗಡ್ಡೆ ಇದೆ ಎಂಬ ಉತ್ತರ ಬಂತು. ಮಗಳ ಜೀವ ಉಳಿಸುವುದಕ್ಕಾಗಿ ಗರ್ಭ ಕೋಶವನ್ನು ತೆಗೆದದ್ದೂ ಆಯಿತು. ಮುಂದೇನು?ಎಂಬ ಭವಿಷ್ಯದ ಯೋಚನೆಯಲ್ಲಿ ಮನೆಯಲ್ಲೇ ಕುಳಿತರೆ ಮತ್ತಷ್ಟು ನೋವು ಜಾಸ್ತಿ ಆಗುವ ಸಂಭವವನ್ನು ತಪ್ಪಿಸುವುದಕ್ಕಾಗಿ ಗದ್ದೆ ಬೇಸಾಯದ ಕಡೆಗೆ ಮನ ಮಾಡಿದೆ ಎಂಬ ಮಾತು ಮುಗಿಸುವಾಗ ನನ್ನ ಅಂತರಂಗದಲ್ಲಿಯೇ ನೋವುಗಳು ಉಲ್ಬಣಿಸಿ ಬಂತು. ನನ್ನ ಅರಿವಿಗೆ ಬಾರದಂತೆ ಕಣ್ಣಂಚಿನಲ್ಲಿ ಅಲ್ಪಸ್ವಲ್ಪ ನೀರೂ ಜಿನುಗಿತು.

ಇದು ಇಲ್ಲಿಗೆ ಮುಗಿಯಲಿಲ್ಲ, ನಮ್ಮ ಸುತ್ತಮುತ್ತಲಿನಲ್ಲೇ ಅನೇಕ ಮನೆಗಳಲ್ಲೂ ಇದೆ ಮತ್ತು ಓರ್ವ ಹುಡುಗಿ ಅಕಾಲ ಮೃತ್ಯುವಶ ಆಗಿದ್ದಾಳೆ ಎಂದೆನ್ನುವಾಗ ಭಯವೂ ಆಯಿತು.

ಆ ನಂತರದ ದಿನಗಳಲ್ಲಿ ನನ್ನ ಮನಸ್ಸನ್ನು ಈ ವಿಷಯ ಕೊರೆಯುತ್ತಿತ್ತು. ಉಣ್ಣುವ ಆಹಾರವನ್ನು ಬೆಳೆಸುವಲ್ಲಿ ಬಳಸುವ ವಿಷ, ಬೆಳೆದು ಬಂದದ್ದನ್ನು ಸಂಗ್ರಹಿಸಿ ಕಾಪಿಡುವಲ್ಲಿ ಬಳಸುವ ವಿಷ, ಅಯ್ಯೋ ಕಳೆಗಳೇ ಎಂದು ಬಳಸುವ ಕಳೆನಾಶಕ , ಬೇಕೋ ಬೇಡವೋ ಎಂಬ ಅರಿವಿಲ್ಲದೆ ಅವರಿವರ ಮಾತನ್ನು ಕೇಳಿ ಬಳಸುವ ಕೀಟನಾಶಕಗಳು ನನ್ನ ಕಣ್ಣ ಮುಂದೆ ಧುತ್ತೆಂದು ಬಂತು.

ಆಧುನಿಕ ಬದುಕಿನ ವ್ಯಾಯಾಮ ರಹಿತ ಜೀವನಶೈಲಿ, ರಂಗುರಂಗಿನ ಬೇಕರಿ ತಿಂಡಿಗಳು, ಗಲ್ಲಿಗಲ್ಲಿಗಳಲ್ಲಿ, ಬೀದಿಬೀದಿಗಳಲ್ಲಿ, ಮಾಲುಗಳಲ್ಲಿ ದೊರೆಯುವ ಸಾಲು ಸಾಲು ಜಂಕ್ ಫುಡ್‌ ಗಳ ದುರ್ವಾಸನೆ ಮೂಗಿಗೆ ಅಪ್ಪಳಿಸುತ್ತಿತ್ತು. ಅಭಿವೃದ್ದಿಯ ಪಥವನ್ನು ಉದ್ಘೋಷಿಸಿಕೊಂಡು ಹೋಗುವ ಸಮಾಜ ಎತ್ತ ಸಾಗುತ್ತಿದೆ, ಮತ್ತು ಅವನತಿಯ ಹತ್ತಿರ ಸಾಗುತ್ತಿದೆಯೇ?ಎಂಬ ಚಿಂತೆ ಮನದಲ್ಲಿ ಮೂಡಿತ್ತು.

ವಾಟ್ಸಪ್ ಗುಂಪೊಂದರಲ್ಲಿ ಇತ್ತೀಚೆಗೆ ಕಣ್ಮರೆಯಾಗುತ್ತಿರುವ ಕಾಗೆ, ಗುಬ್ಬಿ ಕೆಲವೊಂದು ಹಾವುಗಳು, ಜೀವಿಗಳ ಬಗ್ಗೆ ವಿಮರ್ಶೆಯೊಂದು ನಡೆಯುತ್ತಿತ್ತು. ಅದನ್ನು ಓದುತ್ತಿದ್ದಂತೆ ಮೇಲಿನ ಪ್ರಕರಣಕ್ಕೂ ಅದಕ್ಕೂ ತಾಳೆ ಬಂತು. ಈಗಿನ 30 ವರ್ಷಗಳಲ್ಲಿ ನಮ್ಮ ಕಣ್ಣೆದುರಲ್ಲೇ ನಾಶವಾದ ಅನೇಕ ಜೀವ ಸಂತಾನಗಳು ಅದೆಷ್ಟು ನರಕ ಯಾತನೆ ಅನುಭವಿಸಿರಬಹುದು, ತಮ್ಮ ಕಣ್ಣೆದುರೇ ನಾಶವಾಗುವ ಭವಿಷ್ಯದ ಕುಡಿಗಳಿಗೋಸ್ಕರ ಬೇಸರಿಸಿರಬಹುದು ಎಂಬುದನ್ನು ಯೋಚಿಸುವಾಗ ನಾವೂ ಆ ದಿಕ್ಕಿನಲ್ಲಿಯೇ ಸಾಗುತ್ತಿದ್ದೇವೆ ಎಂಬ ಎಚ್ಚರಿಕೆ ಗಂಟೆ ಇರಬಹುದೆಂದು ಮನಸ್ಸು ಕೂಗಿ ಹೇಳುತ್ತಿತ್ತು. ಅದೆಷ್ಟೋ ನಾಗರೀಕತೆಗಳು ನಾಶವಾಗಿ ಹೋಗಿದೆಯಂತೆ, ಅದೆಷ್ಟೋ ಸಂಸ್ಥಾನಗಳು ಅಳಿದು ಹೋಗಿದೆಯಂತೆ, ಅಂತೆಯೇ ಈ ನಾಗರೀಕತೆಯು ನಾಶದತ್ತ ಸಾಗುತ್ತಿದೆಯೇ? ಎಂಬ ಪ್ರಶ್ನೆ ಮನದಲ್ಲಿ ಮೂಡಿದೆ.

ಚಿಂತ್ಯಾಕೆ ಮಾಡುತಿದ್ದಿ ಚಿನ್ಮಯನಿದ್ದಾನೆ, ನಿನ್ನ ಚಿಂತೆಯ ಬಿಡಿಸೋ ಗೌರಿಕಾಂತ ನಿದ್ದಾನೆ……..  ಎಂಬ ದಾಸ ವಾಣಿಯನ್ನು ಸ್ಮರಿಸುತ್ತಾ ಗೌರೀಕಾಂತನನ್ನು ಉತ್ತಮ ಭವಿಷ್ಯಕ್ಕಾಗಿ ನೆನೆಯ ಹತ್ತಿದೆ.
ಬರಹ :
ಎ.ಪಿ. ಸದಾಶಿವ, ಮರಿಕೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

5 minutes ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

17 minutes ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

14 hours ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

16 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

20 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

23 hours ago