Advertisement
ಅನುಕ್ರಮ

ಕೃಷಿಮಾತು | ಕೃಷಿಯಲ್ಲಿ “ವಿಷ” ವಾದ | ನಮ್ಮ ಕಣ್ಣೆದುರಲ್ಲೇ ನಾಶವಾದ ಜೀವ ಸಂತಾನಗಳು ಎಷ್ಟು ? | ಕೃಷಿಕ ಎ ಪಿ ಸದಾಶಿವ ತೆರೆದಿಟ್ಟ ಸತ್ಯ |

Share

ಕೆಲದಿನಗಳ ಹಿಂದೆ ಸಂಜೆಯ ಹೊತ್ತು ಗದ್ದೆಯ ಬದಿಗೆ ಹೋಗಿದ್ದೆ. ಸ್ಥಳೀಯರೊಬ್ಬರು ಹಡಿಲು ಬಿದ್ದ ಗದ್ದೆಯನ್ನು ವೀಕ್ಷಿಸುತ್ತಿದ್ದರು. ನನ್ನನ್ನು ಕಂಡೊಡನೆ ನಮಸ್ಕಾರಗಳ ವಿನಿಮಯದೊಂದಿಗೆ, ಈ ವರ್ಷ ಗದ್ದೆ ಬೇಸಾಯ ಮಾಡಿದರೆ ಹೇಗೆ?ಎಂದು ಆಲೋಚಿಸುತ್ತಿದ್ದೇನೆ ಅಂದರು. ಮನೆಯಲ್ಲಿ ಕುಳಿತು ಕುಳಿತು ಬೇಸರವಾಗುತ್ತಿದೆ, ಮನಸ್ಸಿನ ನೋವು ಪರಿಹಾರವಾಗಲು ಗದ್ದೆ ಬೇಸಾಯ ಸಹಾಯಕವಾಗಬಹುದು ಎನ್ನುವ ದೃಷ್ಟಿಯಿಂದ ಆಲೋಚನೆ ಬಂತು ಅಂತಂದರು.

ಮನಸ್ಸಿನ ನೋವು,ಗದ್ದೆ ಬೇಸಾಯ ಈ ಎರಡು ವಿಷಯಗಳು ನನಗೇಕೋ ಕುತೂಹಲವುಂಟಾಯಿತು. ಅವರು ಮುಂದುವರಿದು ಹೇಳಿದ ವಿಷಯ ಮಾತ್ರ ತುಂಬಾ ಆಘಾತಕಾರಿ ಮತ್ತು ಸರ್ವರಿಗೂ ಎಚ್ಚರಿಕೆಯ ಗಂಟೆ ಎಂದು ನನ್ನ ಮನಸ್ಸಿಗೆ ಅರಿವಾಯಿತು.

ಇನ್ನೂ ಚಿಕ್ಕಪ್ರಾಯದ ಮಗಳು, ಮದುವೆಯಾಗಿ ವರುಷ ಎರಡಾಯಿತು. ಆಗಾಗ ಬಂದ ಅಸೌಖ್ಯದ ಕಾರಣದಿಂದ ಆಸ್ಪತ್ರೆಗೆ ಭೇಟಿ ನೀಡಿತು. ಆಧುನಿಕ ಪರೀಕ್ಷೆಗಳ ಮೂಲಕ ಗರ್ಭಕೋಶದಲ್ಲಿ ಕ್ಯಾನ್ಸರ್ ಗಡ್ಡೆ ಇದೆ ಎಂಬ ಉತ್ತರ ಬಂತು. ಮಗಳ ಜೀವ ಉಳಿಸುವುದಕ್ಕಾಗಿ ಗರ್ಭ ಕೋಶವನ್ನು ತೆಗೆದದ್ದೂ ಆಯಿತು. ಮುಂದೇನು?ಎಂಬ ಭವಿಷ್ಯದ ಯೋಚನೆಯಲ್ಲಿ ಮನೆಯಲ್ಲೇ ಕುಳಿತರೆ ಮತ್ತಷ್ಟು ನೋವು ಜಾಸ್ತಿ ಆಗುವ ಸಂಭವವನ್ನು ತಪ್ಪಿಸುವುದಕ್ಕಾಗಿ ಗದ್ದೆ ಬೇಸಾಯದ ಕಡೆಗೆ ಮನ ಮಾಡಿದೆ ಎಂಬ ಮಾತು ಮುಗಿಸುವಾಗ ನನ್ನ ಅಂತರಂಗದಲ್ಲಿಯೇ ನೋವುಗಳು ಉಲ್ಬಣಿಸಿ ಬಂತು. ನನ್ನ ಅರಿವಿಗೆ ಬಾರದಂತೆ ಕಣ್ಣಂಚಿನಲ್ಲಿ ಅಲ್ಪಸ್ವಲ್ಪ ನೀರೂ ಜಿನುಗಿತು.

ಇದು ಇಲ್ಲಿಗೆ ಮುಗಿಯಲಿಲ್ಲ, ನಮ್ಮ ಸುತ್ತಮುತ್ತಲಿನಲ್ಲೇ ಅನೇಕ ಮನೆಗಳಲ್ಲೂ ಇದೆ ಮತ್ತು ಓರ್ವ ಹುಡುಗಿ ಅಕಾಲ ಮೃತ್ಯುವಶ ಆಗಿದ್ದಾಳೆ ಎಂದೆನ್ನುವಾಗ ಭಯವೂ ಆಯಿತು.

ಆ ನಂತರದ ದಿನಗಳಲ್ಲಿ ನನ್ನ ಮನಸ್ಸನ್ನು ಈ ವಿಷಯ ಕೊರೆಯುತ್ತಿತ್ತು. ಉಣ್ಣುವ ಆಹಾರವನ್ನು ಬೆಳೆಸುವಲ್ಲಿ ಬಳಸುವ ವಿಷ, ಬೆಳೆದು ಬಂದದ್ದನ್ನು ಸಂಗ್ರಹಿಸಿ ಕಾಪಿಡುವಲ್ಲಿ ಬಳಸುವ ವಿಷ, ಅಯ್ಯೋ ಕಳೆಗಳೇ ಎಂದು ಬಳಸುವ ಕಳೆನಾಶಕ , ಬೇಕೋ ಬೇಡವೋ ಎಂಬ ಅರಿವಿಲ್ಲದೆ ಅವರಿವರ ಮಾತನ್ನು ಕೇಳಿ ಬಳಸುವ ಕೀಟನಾಶಕಗಳು ನನ್ನ ಕಣ್ಣ ಮುಂದೆ ಧುತ್ತೆಂದು ಬಂತು.

ಆಧುನಿಕ ಬದುಕಿನ ವ್ಯಾಯಾಮ ರಹಿತ ಜೀವನಶೈಲಿ, ರಂಗುರಂಗಿನ ಬೇಕರಿ ತಿಂಡಿಗಳು, ಗಲ್ಲಿಗಲ್ಲಿಗಳಲ್ಲಿ, ಬೀದಿಬೀದಿಗಳಲ್ಲಿ, ಮಾಲುಗಳಲ್ಲಿ ದೊರೆಯುವ ಸಾಲು ಸಾಲು ಜಂಕ್ ಫುಡ್‌ ಗಳ ದುರ್ವಾಸನೆ ಮೂಗಿಗೆ ಅಪ್ಪಳಿಸುತ್ತಿತ್ತು. ಅಭಿವೃದ್ದಿಯ ಪಥವನ್ನು ಉದ್ಘೋಷಿಸಿಕೊಂಡು ಹೋಗುವ ಸಮಾಜ ಎತ್ತ ಸಾಗುತ್ತಿದೆ, ಮತ್ತು ಅವನತಿಯ ಹತ್ತಿರ ಸಾಗುತ್ತಿದೆಯೇ?ಎಂಬ ಚಿಂತೆ ಮನದಲ್ಲಿ ಮೂಡಿತ್ತು.

ವಾಟ್ಸಪ್ ಗುಂಪೊಂದರಲ್ಲಿ ಇತ್ತೀಚೆಗೆ ಕಣ್ಮರೆಯಾಗುತ್ತಿರುವ ಕಾಗೆ, ಗುಬ್ಬಿ ಕೆಲವೊಂದು ಹಾವುಗಳು, ಜೀವಿಗಳ ಬಗ್ಗೆ ವಿಮರ್ಶೆಯೊಂದು ನಡೆಯುತ್ತಿತ್ತು. ಅದನ್ನು ಓದುತ್ತಿದ್ದಂತೆ ಮೇಲಿನ ಪ್ರಕರಣಕ್ಕೂ ಅದಕ್ಕೂ ತಾಳೆ ಬಂತು. ಈಗಿನ 30 ವರ್ಷಗಳಲ್ಲಿ ನಮ್ಮ ಕಣ್ಣೆದುರಲ್ಲೇ ನಾಶವಾದ ಅನೇಕ ಜೀವ ಸಂತಾನಗಳು ಅದೆಷ್ಟು ನರಕ ಯಾತನೆ ಅನುಭವಿಸಿರಬಹುದು, ತಮ್ಮ ಕಣ್ಣೆದುರೇ ನಾಶವಾಗುವ ಭವಿಷ್ಯದ ಕುಡಿಗಳಿಗೋಸ್ಕರ ಬೇಸರಿಸಿರಬಹುದು ಎಂಬುದನ್ನು ಯೋಚಿಸುವಾಗ ನಾವೂ ಆ ದಿಕ್ಕಿನಲ್ಲಿಯೇ ಸಾಗುತ್ತಿದ್ದೇವೆ ಎಂಬ ಎಚ್ಚರಿಕೆ ಗಂಟೆ ಇರಬಹುದೆಂದು ಮನಸ್ಸು ಕೂಗಿ ಹೇಳುತ್ತಿತ್ತು. ಅದೆಷ್ಟೋ ನಾಗರೀಕತೆಗಳು ನಾಶವಾಗಿ ಹೋಗಿದೆಯಂತೆ, ಅದೆಷ್ಟೋ ಸಂಸ್ಥಾನಗಳು ಅಳಿದು ಹೋಗಿದೆಯಂತೆ, ಅಂತೆಯೇ ಈ ನಾಗರೀಕತೆಯು ನಾಶದತ್ತ ಸಾಗುತ್ತಿದೆಯೇ? ಎಂಬ ಪ್ರಶ್ನೆ ಮನದಲ್ಲಿ ಮೂಡಿದೆ.

ಚಿಂತ್ಯಾಕೆ ಮಾಡುತಿದ್ದಿ ಚಿನ್ಮಯನಿದ್ದಾನೆ, ನಿನ್ನ ಚಿಂತೆಯ ಬಿಡಿಸೋ ಗೌರಿಕಾಂತ ನಿದ್ದಾನೆ……..  ಎಂಬ ದಾಸ ವಾಣಿಯನ್ನು ಸ್ಮರಿಸುತ್ತಾ ಗೌರೀಕಾಂತನನ್ನು ಉತ್ತಮ ಭವಿಷ್ಯಕ್ಕಾಗಿ ನೆನೆಯ ಹತ್ತಿದೆ.
ಬರಹ :
ಎ.ಪಿ. ಸದಾಶಿವ, ಮರಿಕೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಎ ಪಿ ಸದಾಶಿವ ಮರಿಕೆ

ಸಾವಯವ ಕೃಷಿಕರು, ಪುತ್ತೂರು ಕಳೆದ ಹಲವಾರು ವರ್ಷಗಳಿಂದ ಸಾವಯವ ಕೃಷಿ, ಗೋಆಧಾರಿತ ಕೃಷಿಯ ಮೂಲಕ ಗಮನ ಸೆಳೆದ ಕೃಷಿಕ ಇವರು.

Published by
ಎ ಪಿ ಸದಾಶಿವ ಮರಿಕೆ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 hour ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

10 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

14 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago