ಕಿಸಾನ್‍ಸಮ್ಮಾನ್ ನಿಧಿ ಯೋಜನೆ | ಆ.31 ರೊಳಗೆ ಇ-ಕೆವೈಸಿ ಮಾಡಿಸಲು ರೈತರಿಗೆ ಅವಕಾಶ |

August 23, 2022
7:31 PM

ಪ್ರಧಾನ ಮಂತ್ರಿ ಕಿಸಾನ್‍ಸಮ್ಮಾನ್ ನಿಧಿ ಯೋಜನೆಯಡಿ (ಪಿಎಂಕಿಸಾನ್) ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸೌಲಭ್ಯವನ್ನು ಮುಂದುವರಿಸಲು ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಅಥವಾ ಪೋರ್ಟಲ್‍ನ ಫಾರ್ಮರ್ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಲು ಇದೇ ಆ.31ರ ವರೆಗೆ ಅವಕಾಶ ನೀಡಲಾಗಿದೆ. ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ಪಿ.ಎಂ. ಕಿಸಾನ್ ಯೋಜನೆ ಸೌಲಭ್ಯ ಮುಂದುವರಿಸಲು ಇ-ಕೆವೈಸಿ ಮಾಡಿಕೊಳ್ಳಲು ಬಾಕಿ ಇರುವ ರೈತರು ಅಂತಿಮ ದಿನಾಂಕದೊಳಗೆ ಸಮೀಪದ ನಾಗರೀಕ ಸೇವಾ ಕೇಂದ್ರ (ಸಿಎಸ್‍ಸಿ), ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಆಧಾರ್ ಮತ್ತು ದೂರವಾಣಿ ಸಂಖ್ಯೆ ಜೋಡಣೆಯಾಗದಿದ್ದಲ್ಲಿ ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಬಯೋಮೆಟ್ರಿಕ್ ಆಧಾರಿತವಾಗಿ ಮಾಡಿಕೊಳ್ಳಬಹುದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror