ಅಡಿಕೆ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಅವಶ್ಯಕತೆ ಇದೆ. ರೋಗ ನಿರ್ವಹಣೆಗೂ ಮುನ್ನ ಪೋಷಕಾಂಶಗಳ ನಿರ್ವಹಣೆ ಅತೀ ಮುಖ್ಯವಾಗಿದೆ. ಪೋಷಕಾಂಶಗಳ ನಿರ್ವಹಣೆ ಸರಿಯಾಗಿ ಆದರೆ ರೋಗ ನಿರ್ವಹಣೆಯ ಕೆಲಸ ಕಡಿಮೆಯಾಗುತ್ತದೆ ಎಂದು ಕಾಸರಗೋಡು ಸಿಪಿಸಿಆರ್ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ ಹೇಳಿದರು.
ಅವರು ಕ್ಯಾಂಪ್ಕೋ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕೃಷಿ ಯಂತ್ರ ಮೇಳಮತ್ತು ಕನಸಿನ ಮನೆ ಕಾರ್ಯಕ್ರಮದಲ್ಲಿ ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿಯಲ್ಲಿ ಮಾತನಾಡಿದರು. ಕರಾವಳಿಯಲ್ಲಿ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್ ಐ ಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾಂಬಿಕಾ ನಿರೂಪಿಸಿ ವಂದಿಸಿದರು.17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಚಳಿಗಾಲ ಎಂದರೆ ಒಂದು ರೀತಿಯಲ್ಲಿ ಕಿರಿಕಿರಿ. ವಯಸ್ಸಾದವರಂತೆ ಚರ್ಮ ಸುಕ್ಕು ಕಟ್ಟುವುದು, ಆರೋಗ್ಯದಲ್ಲಿ…
ಚಳಿಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗಿ ಕಾಣುತ್ತದೆ. ಆದರಲ್ಲೂ ಹೃದಯದ ಸಮಸ್ಯೆಗಳ ಬಗ್ಗೆ ಕಾಳಜಿ…
ಮಹಿಳೆಯರು ಸಹ ಉದ್ಯೋಗವನ್ನು ಮಾಡಬೇಕೆಂದು ಸರ್ಕಾರವು ಅನೇಕ ರೀತಿಯ ಯೋಜನೆಯನ್ನು ಜಾರಿಗೊಳಿಸಿದ್ದು, ಟ್ರೈಲರಿಂಗ್…
ಮೊಟ್ಟೆಗಳು ಉತ್ತಮ ಗುಣಮಟ್ಟದ ಪ್ರೋಟೀನ್ ಅಂಶ ವಾಗಿದ್ದು, ಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ನೀಡುತ್ತಿದ್ದರು.…
ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು…