Advertisement
ಸುದ್ದಿಗಳು

ಕೃಷಿಯಂತ್ರ ಮೇಳ | ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಅಗತ್ಯ | ವಿಜ್ಞಾನಿ ಡಾ. ವಿನಾಯಕ ಹೆಗಡೆ ಅಭಿಮತ |

Share

ಅಡಿಕೆ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಅವಶ್ಯಕತೆ ಇದೆ. ರೋಗ ನಿರ್ವಹಣೆಗೂ ಮುನ್ನ ಪೋಷಕಾಂಶಗಳ ನಿರ್ವಹಣೆ ಅತೀ ಮುಖ್ಯವಾಗಿದೆ. ಪೋಷಕಾಂಶಗಳ ನಿರ್ವಹಣೆ ಸರಿಯಾಗಿ ಆದರೆ ರೋಗ ನಿರ್ವಹಣೆಯ ಕೆಲಸ ಕಡಿಮೆಯಾಗುತ್ತದೆ ಎಂದು ಕಾಸರಗೋಡು ಸಿಪಿಸಿಆರ್‍ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ  ಹೇಳಿದರು.

Advertisement
Advertisement
Advertisement
Advertisement

ಅವರು ಕ್ಯಾಂಪ್ಕೋ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕೃಷಿ ಯಂತ್ರ ಮೇಳಮತ್ತು ಕನಸಿನ ಮನೆ ಕಾರ್ಯಕ್ರಮದಲ್ಲಿ  ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿಯಲ್ಲಿ ಮಾತನಾಡಿದರು. ಕರಾವಳಿಯಲ್ಲಿ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.

Advertisement

ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್ ಐ ಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು.

Advertisement
ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾಂಬಿಕಾ ನಿರೂಪಿಸಿ ವಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

5 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago