Advertisement
ಸುದ್ದಿಗಳು

ಕೃಷಿಯಂತ್ರ ಮೇಳ | ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಅಗತ್ಯ | ವಿಜ್ಞಾನಿ ಡಾ. ವಿನಾಯಕ ಹೆಗಡೆ ಅಭಿಮತ |

Share

ಅಡಿಕೆ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಅವಶ್ಯಕತೆ ಇದೆ. ರೋಗ ನಿರ್ವಹಣೆಗೂ ಮುನ್ನ ಪೋಷಕಾಂಶಗಳ ನಿರ್ವಹಣೆ ಅತೀ ಮುಖ್ಯವಾಗಿದೆ. ಪೋಷಕಾಂಶಗಳ ನಿರ್ವಹಣೆ ಸರಿಯಾಗಿ ಆದರೆ ರೋಗ ನಿರ್ವಹಣೆಯ ಕೆಲಸ ಕಡಿಮೆಯಾಗುತ್ತದೆ ಎಂದು ಕಾಸರಗೋಡು ಸಿಪಿಸಿಆರ್‍ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ  ಹೇಳಿದರು.

ಅವರು ಕ್ಯಾಂಪ್ಕೋ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕೃಷಿ ಯಂತ್ರ ಮೇಳಮತ್ತು ಕನಸಿನ ಮನೆ ಕಾರ್ಯಕ್ರಮದಲ್ಲಿ  ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿಯಲ್ಲಿ ಮಾತನಾಡಿದರು. ಕರಾವಳಿಯಲ್ಲಿ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್ ಐ ಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾಂಬಿಕಾ ನಿರೂಪಿಸಿ ವಂದಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

12 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

1 day ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago