Advertisement
ಸುದ್ದಿಗಳು

ಕೃಷಿಯಂತ್ರ ಮೇಳ | ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಅಗತ್ಯ | ವಿಜ್ಞಾನಿ ಡಾ. ವಿನಾಯಕ ಹೆಗಡೆ ಅಭಿಮತ |

Share

ಅಡಿಕೆ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಅವಶ್ಯಕತೆ ಇದೆ. ರೋಗ ನಿರ್ವಹಣೆಗೂ ಮುನ್ನ ಪೋಷಕಾಂಶಗಳ ನಿರ್ವಹಣೆ ಅತೀ ಮುಖ್ಯವಾಗಿದೆ. ಪೋಷಕಾಂಶಗಳ ನಿರ್ವಹಣೆ ಸರಿಯಾಗಿ ಆದರೆ ರೋಗ ನಿರ್ವಹಣೆಯ ಕೆಲಸ ಕಡಿಮೆಯಾಗುತ್ತದೆ ಎಂದು ಕಾಸರಗೋಡು ಸಿಪಿಸಿಆರ್‍ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ  ಹೇಳಿದರು.

ಅವರು ಕ್ಯಾಂಪ್ಕೋ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕೃಷಿ ಯಂತ್ರ ಮೇಳಮತ್ತು ಕನಸಿನ ಮನೆ ಕಾರ್ಯಕ್ರಮದಲ್ಲಿ  ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿಯಲ್ಲಿ ಮಾತನಾಡಿದರು. ಕರಾವಳಿಯಲ್ಲಿ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್ ಐ ಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾಂಬಿಕಾ ನಿರೂಪಿಸಿ ವಂದಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

3 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

3 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

8 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

8 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

8 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

24 hours ago