Advertisement
ಸುದ್ದಿಗಳು

ಕೃಷಿಯಂತ್ರ ಮೇಳ | ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಅಗತ್ಯ | ವಿಜ್ಞಾನಿ ಡಾ. ವಿನಾಯಕ ಹೆಗಡೆ ಅಭಿಮತ |

Share

ಅಡಿಕೆ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಅವಶ್ಯಕತೆ ಇದೆ. ರೋಗ ನಿರ್ವಹಣೆಗೂ ಮುನ್ನ ಪೋಷಕಾಂಶಗಳ ನಿರ್ವಹಣೆ ಅತೀ ಮುಖ್ಯವಾಗಿದೆ. ಪೋಷಕಾಂಶಗಳ ನಿರ್ವಹಣೆ ಸರಿಯಾಗಿ ಆದರೆ ರೋಗ ನಿರ್ವಹಣೆಯ ಕೆಲಸ ಕಡಿಮೆಯಾಗುತ್ತದೆ ಎಂದು ಕಾಸರಗೋಡು ಸಿಪಿಸಿಆರ್‍ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ  ಹೇಳಿದರು.

ಅವರು ಕ್ಯಾಂಪ್ಕೋ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕೃಷಿ ಯಂತ್ರ ಮೇಳಮತ್ತು ಕನಸಿನ ಮನೆ ಕಾರ್ಯಕ್ರಮದಲ್ಲಿ  ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿಯಲ್ಲಿ ಮಾತನಾಡಿದರು. ಕರಾವಳಿಯಲ್ಲಿ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್ ಐ ಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾಂಬಿಕಾ ನಿರೂಪಿಸಿ ವಂದಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

6 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

7 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

11 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

12 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago