ಅಡಿಕೆ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಅವಶ್ಯಕತೆ ಇದೆ. ರೋಗ ನಿರ್ವಹಣೆಗೂ ಮುನ್ನ ಪೋಷಕಾಂಶಗಳ ನಿರ್ವಹಣೆ ಅತೀ ಮುಖ್ಯವಾಗಿದೆ. ಪೋಷಕಾಂಶಗಳ ನಿರ್ವಹಣೆ ಸರಿಯಾಗಿ ಆದರೆ ರೋಗ ನಿರ್ವಹಣೆಯ ಕೆಲಸ ಕಡಿಮೆಯಾಗುತ್ತದೆ ಎಂದು ಕಾಸರಗೋಡು ಸಿಪಿಸಿಆರ್ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ ಹೇಳಿದರು.
ಅವರು ಕ್ಯಾಂಪ್ಕೋ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕೃಷಿ ಯಂತ್ರ ಮೇಳಮತ್ತು ಕನಸಿನ ಮನೆ ಕಾರ್ಯಕ್ರಮದಲ್ಲಿ ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿಯಲ್ಲಿ ಮಾತನಾಡಿದರು. ಕರಾವಳಿಯಲ್ಲಿ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್ ಐ ಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾಂಬಿಕಾ ನಿರೂಪಿಸಿ ವಂದಿಸಿದರು.ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…