Advertisement
ಸುದ್ದಿಗಳು

ಕೃಷಿಯಂತ್ರ ಮೇಳ | ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಅಗತ್ಯ | ವಿಜ್ಞಾನಿ ಡಾ. ವಿನಾಯಕ ಹೆಗಡೆ ಅಭಿಮತ |

Share

ಅಡಿಕೆ ಕೃಷಿಯನ್ನು ವೈಜ್ಞಾನಿಕವಾಗಿ ಮಾಡುವ ಅವಶ್ಯಕತೆ ಇದೆ. ರೋಗ ನಿರ್ವಹಣೆಗೂ ಮುನ್ನ ಪೋಷಕಾಂಶಗಳ ನಿರ್ವಹಣೆ ಅತೀ ಮುಖ್ಯವಾಗಿದೆ. ಪೋಷಕಾಂಶಗಳ ನಿರ್ವಹಣೆ ಸರಿಯಾಗಿ ಆದರೆ ರೋಗ ನಿರ್ವಹಣೆಯ ಕೆಲಸ ಕಡಿಮೆಯಾಗುತ್ತದೆ ಎಂದು ಕಾಸರಗೋಡು ಸಿಪಿಸಿಆರ್‍ಐ ಬೆಳೆ ಸಂರಕ್ಷಣಾ ವಿಭಾಗ ಮುಖ್ಯಸ್ಥರಾದ ಡಾ. ವಿನಾಯಕ ಹೆಗಡೆ  ಹೇಳಿದರು.

ಅವರು ಕ್ಯಾಂಪ್ಕೋ , ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ, ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು,ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಪುತ್ತೂರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಕೃಷಿ ಯಂತ್ರ ಮೇಳಮತ್ತು ಕನಸಿನ ಮನೆ ಕಾರ್ಯಕ್ರಮದಲ್ಲಿ  ಅಡಿಕೆ ಬೆಳೆ ನಿರ್ವಹಣೆ ಮತ್ತು ರೋಗಗಳ ಹತೋಟಿ” ಕುರಿತು ವಿಚಾರಗೋಷ್ಟಿಯಲ್ಲಿ ಮಾತನಾಡಿದರು. ಕರಾವಳಿಯಲ್ಲಿ ಅಡಿಕೆ ಕೃಷಿಯಲ್ಲಿ ಕಂಡು ಬರುವ ಎಲೆ ಚುಕ್ಕೆ ರೋಗ, ಹಳದಿ ರೋಗ, ಕೊಳೆ ರೋಗ, ಹಿಂಗಾರ ಒಣಗುವಿಕೆ, ಬೇರು ಹುಳ ಮುಂತಾದ ರೋಗಗಳನ್ನು ನಿವಾರಿಸುವ ಕ್ರಮಗಳ ಬಗ್ಗೆ ಹಾಗೂ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಿಟ್ಲದ ಸಿಪಿಸಿಆರ್ ಐ ಯ ವಿಜ್ಞಾನಿ ಡಾ.ನಾಗರಾಜ್ ಎನ್ ಮಾತನಾಡಿ, ಭಾರತದಲ್ಲಿ ಅಡಿಕೆಗೆ ಒಂದು ಪೂಜ್ಯನೀಯ ಸ್ಥಾನವಿದೆ.ಅದರಲ್ಲೂ ಕರ್ನಾಟಕ ಕೃಷಿಯಲ್ಲಿ ಅಡಿಕೆಯು ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳ ತಳಿಗೆ ಅತೀ ಹೆಚ್ಚು ಬೇಡಿಕೆ ಇದ್ದು ಇದು ಅತೀ ಶೀಘ್ರದಲ್ಲಿ ಫಸಲನ್ನು ನಿಡುವ ತಳಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೂ ಕ್ಯಾಂಪ್ಕೋ ನಿಯಮಿತ ಮಂಗಳೂರಿನ ನಿರ್ದೇಶಕರಾದ ದಯಾನಂದ ಹೆಗಡೆ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಪುತ್ತೂರಿನ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾಂಬಿಕಾ ನಿರೂಪಿಸಿ ವಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

7 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

10 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

11 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

12 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

24 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago