ಪುತ್ತೂರು | ಮೂರು ದಿನಗಳ ಕೃಷಿಯಂತ್ರ ಮೇಳಕ್ಕೆ ತೆರೆ | 4 ಲಕ್ಷಕ್ಕೂ ಅಧಿಕ ಮಂದಿ ಮೇಳಕ್ಕೆ ಭೇಟಿ |

February 12, 2023
11:41 PM

ಪುತ್ತೂರಿನಲ್ಲಿ ನಡೆದ ಐದನೇ ಕೃಷಿ ಯಂತ್ರ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಮೂರು ದಿನಗಳ ಮೇಳದಲ್ಲಿ ಸುಮಾರು 4 ಲಕ್ಷದಷ್ಟು ಜನರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಕೃಷಿಕರಿಗೆ ಅಗತ್ಯ ಯಂತ್ರಗಳ ಪ್ರದರ್ಶನ ಹಾಗೂ ಕನಸಿನ ಮನೆಗೆ ಅಗತ್ಯವಾದ ಮಾಹಿತಿಯು ಈ ಕೃಷಿ ಯಂತ್ರ ಮೇಳದಲ್ಲಿ  ಲಭ್ಯವಾಯಿತು.

ಕ್ಯಾಂಪ್ಕೋ  ಮಂಗಳೂರು,  ಅಡಿಕೆ ಸಂಶೋಧನೆ ಮತ್ತುಅಭಿವೃದ್ಧಿ ಪ್ರತಿಷ್ಠಾನ , ವಿವೇಕಾನಂದ ಕಾಲೇಜ್‍ ಆಫ್‍ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪುತ್ತೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತಆಶ್ರಯದಲ್ಲಿ ನಡೆದ 5ನೇ ಬೃಹತ್ ಕೃಷಿ ಯಂತ್ರವು ಭಾನುವಾರ ಸಂಜೆ ಕೊನೆಗೊಂಡಿತು. ಮೇಳದಲ್ಲಿ  ಕೃಷಿಯಂತ್ರಗಳ ಮಾಹಿತಿ, ಪ್ರದರ್ಶನ ಸೇರಿದಂತೆ ವಿವಿಧ ಮಳಿಗೆಗಳ ಮೂಲಕ ಕೃಷಿ ಸಂಬಂಧಿತ ಹಾಗೂ ಕನಸಿನ ಮನೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿತ್ತು.

ಮೂರು ದಿನಗಳ ಮೇಳದಲ್ಲಿ ಒಟ್ಟಾಗಿ ಸುಮಾರು 4 ಲಕ್ಷ ಕೃಷಿಕರು ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಭಾನುವಾರ ರಾತ್ರಿಯಾದರೂ ಮೇಳದಲ್ಲಿ ಕೃಷಿಕರು ಹಾಗೂ ಸ್ಥಳೀಯರು ತುಂಬಿದ್ದರು. ಮೇಳದ ವ್ಯವಸ್ಥಿತ ಆಯೋಜನೆ ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ವಾಹನ ಪಾರ್ಕಿಂಗ್‌ ಸಹಿತ ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror