ಪುತ್ತೂರಿನಲ್ಲಿ ನಡೆದ ಐದನೇ ಕೃಷಿ ಯಂತ್ರ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಮೂರು ದಿನಗಳ ಮೇಳದಲ್ಲಿ ಸುಮಾರು 4 ಲಕ್ಷದಷ್ಟು ಜನರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಕೃಷಿಕರಿಗೆ ಅಗತ್ಯ ಯಂತ್ರಗಳ ಪ್ರದರ್ಶನ ಹಾಗೂ ಕನಸಿನ ಮನೆಗೆ ಅಗತ್ಯವಾದ ಮಾಹಿತಿಯು ಈ ಕೃಷಿ ಯಂತ್ರ ಮೇಳದಲ್ಲಿ ಲಭ್ಯವಾಯಿತು.
ಕ್ಯಾಂಪ್ಕೋ ಮಂಗಳೂರು, ಅಡಿಕೆ ಸಂಶೋಧನೆ ಮತ್ತುಅಭಿವೃದ್ಧಿ ಪ್ರತಿಷ್ಠಾನ , ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪುತ್ತೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತಆಶ್ರಯದಲ್ಲಿ ನಡೆದ 5ನೇ ಬೃಹತ್ ಕೃಷಿ ಯಂತ್ರವು ಭಾನುವಾರ ಸಂಜೆ ಕೊನೆಗೊಂಡಿತು. ಮೇಳದಲ್ಲಿ ಕೃಷಿಯಂತ್ರಗಳ ಮಾಹಿತಿ, ಪ್ರದರ್ಶನ ಸೇರಿದಂತೆ ವಿವಿಧ ಮಳಿಗೆಗಳ ಮೂಲಕ ಕೃಷಿ ಸಂಬಂಧಿತ ಹಾಗೂ ಕನಸಿನ ಮನೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿತ್ತು.
ಮೂರು ದಿನಗಳ ಮೇಳದಲ್ಲಿ ಒಟ್ಟಾಗಿ ಸುಮಾರು 4 ಲಕ್ಷ ಕೃಷಿಕರು ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಭಾನುವಾರ ರಾತ್ರಿಯಾದರೂ ಮೇಳದಲ್ಲಿ ಕೃಷಿಕರು ಹಾಗೂ ಸ್ಥಳೀಯರು ತುಂಬಿದ್ದರು. ಮೇಳದ ವ್ಯವಸ್ಥಿತ ಆಯೋಜನೆ ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ವಾಹನ ಪಾರ್ಕಿಂಗ್ ಸಹಿತ ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿತ್ತು.
ರಾಜ್ಯದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಸಹಜವಾಗಿ ಸಾವನ್ನಪ್ಪುವ ಕಾಡುಪ್ರಾಣಿಗಳ ಕಳೇಬರವನ್ನು ಸುಡದೆ ಕಾಡಿನಲ್ಲಿಯೇ…
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…