ಪುತ್ತೂರಿನಲ್ಲಿ ನಡೆದ ಐದನೇ ಕೃಷಿ ಯಂತ್ರ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಮೂರು ದಿನಗಳ ಮೇಳದಲ್ಲಿ ಸುಮಾರು 4 ಲಕ್ಷದಷ್ಟು ಜನರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಕೃಷಿಕರಿಗೆ ಅಗತ್ಯ ಯಂತ್ರಗಳ ಪ್ರದರ್ಶನ ಹಾಗೂ ಕನಸಿನ ಮನೆಗೆ ಅಗತ್ಯವಾದ ಮಾಹಿತಿಯು ಈ ಕೃಷಿ ಯಂತ್ರ ಮೇಳದಲ್ಲಿ ಲಭ್ಯವಾಯಿತು.
ಕ್ಯಾಂಪ್ಕೋ ಮಂಗಳೂರು, ಅಡಿಕೆ ಸಂಶೋಧನೆ ಮತ್ತುಅಭಿವೃದ್ಧಿ ಪ್ರತಿಷ್ಠಾನ , ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪುತ್ತೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತಆಶ್ರಯದಲ್ಲಿ ನಡೆದ 5ನೇ ಬೃಹತ್ ಕೃಷಿ ಯಂತ್ರವು ಭಾನುವಾರ ಸಂಜೆ ಕೊನೆಗೊಂಡಿತು. ಮೇಳದಲ್ಲಿ ಕೃಷಿಯಂತ್ರಗಳ ಮಾಹಿತಿ, ಪ್ರದರ್ಶನ ಸೇರಿದಂತೆ ವಿವಿಧ ಮಳಿಗೆಗಳ ಮೂಲಕ ಕೃಷಿ ಸಂಬಂಧಿತ ಹಾಗೂ ಕನಸಿನ ಮನೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿತ್ತು.
ಮೂರು ದಿನಗಳ ಮೇಳದಲ್ಲಿ ಒಟ್ಟಾಗಿ ಸುಮಾರು 4 ಲಕ್ಷ ಕೃಷಿಕರು ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಭಾನುವಾರ ರಾತ್ರಿಯಾದರೂ ಮೇಳದಲ್ಲಿ ಕೃಷಿಕರು ಹಾಗೂ ಸ್ಥಳೀಯರು ತುಂಬಿದ್ದರು. ಮೇಳದ ವ್ಯವಸ್ಥಿತ ಆಯೋಜನೆ ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ವಾಹನ ಪಾರ್ಕಿಂಗ್ ಸಹಿತ ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿತ್ತು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…