ಪುತ್ತೂರಿನಲ್ಲಿ ನಡೆದ ಐದನೇ ಕೃಷಿ ಯಂತ್ರ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಮೂರು ದಿನಗಳ ಮೇಳದಲ್ಲಿ ಸುಮಾರು 4 ಲಕ್ಷದಷ್ಟು ಜನರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಕೃಷಿಕರಿಗೆ ಅಗತ್ಯ ಯಂತ್ರಗಳ ಪ್ರದರ್ಶನ ಹಾಗೂ ಕನಸಿನ ಮನೆಗೆ ಅಗತ್ಯವಾದ ಮಾಹಿತಿಯು ಈ ಕೃಷಿ ಯಂತ್ರ ಮೇಳದಲ್ಲಿ ಲಭ್ಯವಾಯಿತು.
ಕ್ಯಾಂಪ್ಕೋ ಮಂಗಳೂರು, ಅಡಿಕೆ ಸಂಶೋಧನೆ ಮತ್ತುಅಭಿವೃದ್ಧಿ ಪ್ರತಿಷ್ಠಾನ , ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪುತ್ತೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತಆಶ್ರಯದಲ್ಲಿ ನಡೆದ 5ನೇ ಬೃಹತ್ ಕೃಷಿ ಯಂತ್ರವು ಭಾನುವಾರ ಸಂಜೆ ಕೊನೆಗೊಂಡಿತು. ಮೇಳದಲ್ಲಿ ಕೃಷಿಯಂತ್ರಗಳ ಮಾಹಿತಿ, ಪ್ರದರ್ಶನ ಸೇರಿದಂತೆ ವಿವಿಧ ಮಳಿಗೆಗಳ ಮೂಲಕ ಕೃಷಿ ಸಂಬಂಧಿತ ಹಾಗೂ ಕನಸಿನ ಮನೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿತ್ತು.
ಮೂರು ದಿನಗಳ ಮೇಳದಲ್ಲಿ ಒಟ್ಟಾಗಿ ಸುಮಾರು 4 ಲಕ್ಷ ಕೃಷಿಕರು ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಭಾನುವಾರ ರಾತ್ರಿಯಾದರೂ ಮೇಳದಲ್ಲಿ ಕೃಷಿಕರು ಹಾಗೂ ಸ್ಥಳೀಯರು ತುಂಬಿದ್ದರು. ಮೇಳದ ವ್ಯವಸ್ಥಿತ ಆಯೋಜನೆ ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ವಾಹನ ಪಾರ್ಕಿಂಗ್ ಸಹಿತ ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿತ್ತು.
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…