ಪುತ್ತೂರಿನಲ್ಲಿ ನಡೆದ ಐದನೇ ಕೃಷಿ ಯಂತ್ರ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಮೂರು ದಿನಗಳ ಮೇಳದಲ್ಲಿ ಸುಮಾರು 4 ಲಕ್ಷದಷ್ಟು ಜನರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಕೃಷಿಕರಿಗೆ ಅಗತ್ಯ ಯಂತ್ರಗಳ ಪ್ರದರ್ಶನ ಹಾಗೂ ಕನಸಿನ ಮನೆಗೆ ಅಗತ್ಯವಾದ ಮಾಹಿತಿಯು ಈ ಕೃಷಿ ಯಂತ್ರ ಮೇಳದಲ್ಲಿ ಲಭ್ಯವಾಯಿತು.
ಕ್ಯಾಂಪ್ಕೋ ಮಂಗಳೂರು, ಅಡಿಕೆ ಸಂಶೋಧನೆ ಮತ್ತುಅಭಿವೃದ್ಧಿ ಪ್ರತಿಷ್ಠಾನ , ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪುತ್ತೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತಆಶ್ರಯದಲ್ಲಿ ನಡೆದ 5ನೇ ಬೃಹತ್ ಕೃಷಿ ಯಂತ್ರವು ಭಾನುವಾರ ಸಂಜೆ ಕೊನೆಗೊಂಡಿತು. ಮೇಳದಲ್ಲಿ ಕೃಷಿಯಂತ್ರಗಳ ಮಾಹಿತಿ, ಪ್ರದರ್ಶನ ಸೇರಿದಂತೆ ವಿವಿಧ ಮಳಿಗೆಗಳ ಮೂಲಕ ಕೃಷಿ ಸಂಬಂಧಿತ ಹಾಗೂ ಕನಸಿನ ಮನೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿತ್ತು.
ಮೂರು ದಿನಗಳ ಮೇಳದಲ್ಲಿ ಒಟ್ಟಾಗಿ ಸುಮಾರು 4 ಲಕ್ಷ ಕೃಷಿಕರು ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಭಾನುವಾರ ರಾತ್ರಿಯಾದರೂ ಮೇಳದಲ್ಲಿ ಕೃಷಿಕರು ಹಾಗೂ ಸ್ಥಳೀಯರು ತುಂಬಿದ್ದರು. ಮೇಳದ ವ್ಯವಸ್ಥಿತ ಆಯೋಜನೆ ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ವಾಹನ ಪಾರ್ಕಿಂಗ್ ಸಹಿತ ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿತ್ತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…