ಪುತ್ತೂರಿನಲ್ಲಿ ನಡೆದ ಐದನೇ ಕೃಷಿ ಯಂತ್ರ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಮೂರು ದಿನಗಳ ಮೇಳದಲ್ಲಿ ಸುಮಾರು 4 ಲಕ್ಷದಷ್ಟು ಜನರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಕೃಷಿಕರಿಗೆ ಅಗತ್ಯ ಯಂತ್ರಗಳ ಪ್ರದರ್ಶನ ಹಾಗೂ ಕನಸಿನ ಮನೆಗೆ ಅಗತ್ಯವಾದ ಮಾಹಿತಿಯು ಈ ಕೃಷಿ ಯಂತ್ರ ಮೇಳದಲ್ಲಿ ಲಭ್ಯವಾಯಿತು.
ಕ್ಯಾಂಪ್ಕೋ ಮಂಗಳೂರು, ಅಡಿಕೆ ಸಂಶೋಧನೆ ಮತ್ತುಅಭಿವೃದ್ಧಿ ಪ್ರತಿಷ್ಠಾನ , ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪುತ್ತೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತಆಶ್ರಯದಲ್ಲಿ ನಡೆದ 5ನೇ ಬೃಹತ್ ಕೃಷಿ ಯಂತ್ರವು ಭಾನುವಾರ ಸಂಜೆ ಕೊನೆಗೊಂಡಿತು. ಮೇಳದಲ್ಲಿ ಕೃಷಿಯಂತ್ರಗಳ ಮಾಹಿತಿ, ಪ್ರದರ್ಶನ ಸೇರಿದಂತೆ ವಿವಿಧ ಮಳಿಗೆಗಳ ಮೂಲಕ ಕೃಷಿ ಸಂಬಂಧಿತ ಹಾಗೂ ಕನಸಿನ ಮನೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿತ್ತು.
ಮೂರು ದಿನಗಳ ಮೇಳದಲ್ಲಿ ಒಟ್ಟಾಗಿ ಸುಮಾರು 4 ಲಕ್ಷ ಕೃಷಿಕರು ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಭಾನುವಾರ ರಾತ್ರಿಯಾದರೂ ಮೇಳದಲ್ಲಿ ಕೃಷಿಕರು ಹಾಗೂ ಸ್ಥಳೀಯರು ತುಂಬಿದ್ದರು. ಮೇಳದ ವ್ಯವಸ್ಥಿತ ಆಯೋಜನೆ ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ವಾಹನ ಪಾರ್ಕಿಂಗ್ ಸಹಿತ ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿತ್ತು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…