ಪುತ್ತೂರಿನಲ್ಲಿ ನಡೆದ ಐದನೇ ಕೃಷಿ ಯಂತ್ರ ಮೇಳಕ್ಕೆ ಭಾನುವಾರ ತೆರೆ ಬಿದ್ದಿದೆ. ಮೂರು ದಿನಗಳ ಮೇಳದಲ್ಲಿ ಸುಮಾರು 4 ಲಕ್ಷದಷ್ಟು ಜನರು ಭೇಟಿ ನೀಡಿದ್ದಾರೆ ಎಂದು ಅಂದಾಜಿಸಲಾಗಿದೆ. ಕೃಷಿಕರಿಗೆ ಅಗತ್ಯ ಯಂತ್ರಗಳ ಪ್ರದರ್ಶನ ಹಾಗೂ ಕನಸಿನ ಮನೆಗೆ ಅಗತ್ಯವಾದ ಮಾಹಿತಿಯು ಈ ಕೃಷಿ ಯಂತ್ರ ಮೇಳದಲ್ಲಿ ಲಭ್ಯವಾಯಿತು.
ಕ್ಯಾಂಪ್ಕೋ ಮಂಗಳೂರು, ಅಡಿಕೆ ಸಂಶೋಧನೆ ಮತ್ತುಅಭಿವೃದ್ಧಿ ಪ್ರತಿಷ್ಠಾನ , ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಪುತ್ತೂರು, ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇದರ ಸಂಯುಕ್ತಆಶ್ರಯದಲ್ಲಿ ನಡೆದ 5ನೇ ಬೃಹತ್ ಕೃಷಿ ಯಂತ್ರವು ಭಾನುವಾರ ಸಂಜೆ ಕೊನೆಗೊಂಡಿತು. ಮೇಳದಲ್ಲಿ ಕೃಷಿಯಂತ್ರಗಳ ಮಾಹಿತಿ, ಪ್ರದರ್ಶನ ಸೇರಿದಂತೆ ವಿವಿಧ ಮಳಿಗೆಗಳ ಮೂಲಕ ಕೃಷಿ ಸಂಬಂಧಿತ ಹಾಗೂ ಕನಸಿನ ಮನೆಗೆ ಸಂಬಂಧಿಸಿದ ಮಾಹಿತಿ ಲಭ್ಯವಾಗಿತ್ತು.
ಮೂರು ದಿನಗಳ ಮೇಳದಲ್ಲಿ ಒಟ್ಟಾಗಿ ಸುಮಾರು 4 ಲಕ್ಷ ಕೃಷಿಕರು ಭಾಗವಹಿಸಿದ್ದಾರೆ ಎಂದು ಅಂದಾಜಿಸಲಾಗಿದೆ. ಭಾನುವಾರ ರಾತ್ರಿಯಾದರೂ ಮೇಳದಲ್ಲಿ ಕೃಷಿಕರು ಹಾಗೂ ಸ್ಥಳೀಯರು ತುಂಬಿದ್ದರು. ಮೇಳದ ವ್ಯವಸ್ಥಿತ ಆಯೋಜನೆ ಈ ಬಾರಿ ವಿಶೇಷವಾಗಿ ಗಮನ ಸೆಳೆಯಿತು. ವಾಹನ ಪಾರ್ಕಿಂಗ್ ಸಹಿತ ಎಲ್ಲಾ ವ್ಯವಸ್ಥೆಗಳು ಅಚ್ಚುಕಟ್ಟಾಗಿತ್ತು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…