ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ ಬದಲಾವಣೆಯಿಂದ ಗಂಭೀರವಾಗಿ ಪ್ರಭಾವಕ್ಕೊಳಗಾಗಿದೆ. ಬೆಳೆ ಹಂಗಾಮುಗಳಲ್ಲಿ ಹೆಚ್ಚುತ್ತಿರುವ ಮಧ್ಯಮ ಶ್ರೇಣಿಯ ಬರ ಮತ್ತು ಪ್ರವಾಹಗಳಿಂದ ಮಳೆಯಾಶ್ರಿತ ಕೃಷಿಯು ಅನಿಶ್ಚಿತವಾಗಿರುತ್ತದೆ. ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರಿತ ಕೃಷಿಯಿಂದ ಸುಸ್ಥಿರ ಕೃಷಿಯನ್ನಾಗಿ ರೈತರ ಜೀವನ ಮಟ್ಟವನ್ನು ಉತ್ತಮಪಡಿಸಲು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ನೀರಾವರಿ ಪ್ರದೇಶದ ರೈತರಿಗೆ ನೀರಿನ ಲಭ್ಯತೆ ಖಚಿತವಾದ ಕಾರಣ ನೀರಾವರಿಯಲ್ಲಿ ನಿರೀಕ್ಷಿತ ಆದಾಯ ಸಿಗುವುದರಿಂದ, ವಿವಿಧ ಯೋಜನೆಗಳ ಅನುಕೂಲಗಳನ್ನು ಪಡೆದು ವ್ಯವಸಾಯದಲ್ಲಿ ಹೂಡುವಳಿ ಮಾಡುತ್ತಾರೆ. ಆದರೆ ಒಣ ಭೂಮಿ ರೈತರ ಆದಾಯ, ಮಳೆ ಮೇಲೆ ಅವಲಂಬಿತರಾಗಿರುವುದರಿಂದ ಈ ಸವಲತ್ತುಗಳನ್ನು ಬಳಸಿಕೊಳ್ಳಲು ಸಾಧ್ಯವಾಗದೆ ಇವರ ಜೀವನೋಪಾಯದ ಮೇಲೆ ಪ್ರಭಾವ ಬೀರಿದೆ. ಕಡಿಮೆ ಮಳೆ ಬೀಳುವ ರೈತರು 1000 ಅಡಿವರೆಗೂ ಕೊಳವೆ ಬಾವಿ ಕೊರೆಯಲು ರೂ.2.0 ಲಕ್ಷದವರೆಗೂ ವೆಚ್ಚ ಮಾಡುತಿದ್ದಾರೆ. ಈ ಕೊಳವೆ ಬಾವಿ ವಿಫಲವಾದರೆ ಅಥವಾ ಕೆಲವು ವರ್ಷಗಳ ನಂತರ ಬತ್ತಿ ಹೋದ ಸಂದರ್ಭದಲ್ಲಿ ರೈತರು ಸಾಲ ಭಾಧೆಗೆ ಸಿಲುಕುತಿದ್ದಾರೆ. ಆದ್ದರಿಂದ ರೈತರು ಕೊಳವೆ ಬಾವಿಯ ಬದಲಾಗಿ ಹೂಡಿಕೆಯನ್ನು ಕೃಷಿಭಾಗ್ಯ ಯೋಜನೆಯ ಘಟಕಗಳಲ್ಲಿ ಹೂಡಿಕೆ ಮಾಡಿ ಸುಸ್ಥಿರ ಕೃಷಿಗಾಗಿ ಬಳಸಬಹುದಾಗಿದೆ. ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸರಕಾರ ಶೇ. 90 ರಷ್ಟು ಸಹಾಯಧನ ನೀಡುತ್ತಿದೆ. ತಾಲೂಕಿನಲ್ಲಿ 2024-25 ನೇ ಸಾಲಿನಲ್ಲಿ ಒಟ್ಟು 44 ಕೃಷಿ ಹೊಂಡ ನಿರ್ಮಾಣ ಮಾಡುವ ಗುರಿ ಹೊಂದಿತ್ತು. 44 ರೈತರು ಅರ್ಜಿ ಸಲ್ಲಿಸಿದ್ದರು. ಗುರಿಯಂತೆ 44 ಫಲಾನುಭವಿಗಳು ಕೃಷಿ ಹೊಂಡವನ್ನು ಸರಕಾರದ ಸಹಾಯಧನ ಪಡೆದು ನಿರ್ಮಿಸಿಕೊಂಡಿದ್ದಾರೆ.
ತಾಲೂಕಿನ ಬಹುತೇಕ ರೈತರು ಮಳೆಯ ನೀರನ್ನು ಅವಲಂಬಿತರಾಗಿದ್ದು ಬೇಸಿಗೆಯಲ್ಲಿ ಕೊಳವೆ ಬಾವಿ ನೀರನ್ನು ಅವಲಂಬಿತರಾಗಿದ್ದಾರೆ. ಆದರೆ ಕೊಳವೆ ಬಾವಿ ನೀರಿನಿಂದ ಕೇವಲ 5-6 ಸ್ಪ್ರಿಂಕ್ಲರ್ಗಳಿಂದ ನೀರು ಬೆಳೆಗಳಿಗೆ ಹಾಯಿಸಬಹುದಾಗಿದೆ. ಆದರೆ ಕೃಷಿ ಹೊಂಡ ನಿರ್ಮಾಣದಿಂದ ಸರಾಸರಿ 10-15 ಸ್ಪ್ರಿಂಕ್ಲರ್ಗಳಿಂದ ನೀರು ಬೆಳೆಗಳಿಗೆ ಹಾಯಿಸಬಹುದಾಗಿದೆ. ಇದರಿಂದ ವಿದ್ಯುಚಕ್ತಿ ಬಳಕೆಯನ್ನು ಕಡಿಮೆ ಮಾಡಬಹುದಾಗಿದೆ. ಹಾಗು ಇಡೀ ಭತ್ತದ ಗದ್ದೆಗೆ ಒಮ್ಮೆಲೇ ನೀರು ಹಾಹಿಸಬಹುದಾಗಿದೆ. ಇದರಿಂದ ಕೂಲಿಕಾರ್ಮಿಕರ ಖರ್ಚು ಕೂಡ ಕಡಿಮೆಯಾಗಿದೆ ಹಾಗು ರೈತರಲ್ಲಿ ಕೃಷಿಯಲ್ಲಿನ ಆಸಕ್ತಿ ಹೆಚ್ಚಿದೆ. ಇಷ್ಟೇ ಅಲ್ಲದೆ ರೈತರು ಕೃಷಿ ಹೊಂಡದಲ್ಲಿ ಮೀನು ಕೃಷಿ ಮಾಡುತ್ತಿದ್ದು ಇದು ರೈತರ ಆದಾಯವನ್ನು ಮತ್ತಷ್ಟು ಹೆಚ್ಚಿಸಬಹುದಾಗಿದೆ. ಮೀನಿನ ತ್ಯಾಜ್ಯ ನೀರು ಸಸ್ಯಗಳಿಗೆ ಪೋಷಕಾಂಶಗಳ ಮೂಲವಾಗಿದೆ ಮೀನಿನ ತ್ಯಾಜ್ಯ ವಿಶೇಷವಾಗಿ ಮಲ ವಸ್ತು ಮತ್ತು ತಿನ್ನದ ಆಹಾರವು ಸಾರಜನಕ, ರಂಜಕ ಮತ್ತು ಪೊಟ್ಯಾಷಿಯಂ ನಂತಹ ಅಗತ್ಯ ಸಸ್ಯ ಪೋಷಕಾಂಶಗಳಿಂದ ಸಮ್ರದ್ದವಾಗಿದೆ, ಇದು ನೈಸರ್ಗಿಕ ಮತ್ತು ಸುಸ್ಥಿರ ಗೊಬ್ಬರವಾಗಿ ಕೃಷಿಗೆ ಬಳಸಬಹುದಾಗಿದೆ.
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…