Advertisement
MIRROR FOCUS

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

Share

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ ಬದಲಾವಣೆಯಿಂದ ಗಂಭೀರವಾಗಿ ಪ್ರಭಾವಕ್ಕೊಳಗಾಗಿದೆ. ಬೆಳೆ ಹಂಗಾಮುಗಳಲ್ಲಿ ಹೆಚ್ಚುತ್ತಿರುವ ಮಧ್ಯಮ ಶ್ರೇಣಿಯ ಬರ ಮತ್ತು ಪ್ರವಾಹಗಳಿಂದ ಮಳೆಯಾಶ್ರಿತ ಕೃಷಿಯು ಅನಿಶ್ಚಿತವಾಗಿರುತ್ತದೆ. ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರಿತ ಕೃಷಿಯಿಂದ ಸುಸ್ಥಿರ ಕೃಷಿಯನ್ನಾಗಿ ರೈತರ ಜೀವನ ಮಟ್ಟವನ್ನು ಉತ್ತಮಪಡಿಸಲು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ನೀರಾವರಿ ಪ್ರದೇಶದ ರೈತರಿಗೆ ನೀರಿನ ಲಭ್ಯತೆ ಖಚಿತವಾದ ಕಾರಣ ನೀರಾವರಿಯಲ್ಲಿ ನಿರೀಕ್ಷಿತ ಆದಾಯ ಸಿಗುವುದರಿಂದ, ವಿವಿಧ ಯೋಜನೆಗಳ ಅನುಕೂಲಗಳನ್ನು ಪಡೆದು ವ್ಯವಸಾಯದಲ್ಲಿ ಹೂಡುವಳಿ ಮಾಡುತ್ತಾರೆ. ಆದರೆ ಒಣ ಭೂಮಿ ರೈತರ ಆದಾಯ, ಮಳೆ ಮೇಲೆ ಅವಲಂಬಿತರಾಗಿರುವುದರಿಂದ ಈ ಸವಲತ್ತುಗಳನ್ನು ಬಳಸಿಕೊಳ್ಳಲು ಸಾಧ್ಯವಾಗದೆ ಇವರ ಜೀವನೋಪಾಯದ ಮೇಲೆ ಪ್ರಭಾವ ಬೀರಿದೆ. ಕಡಿಮೆ ಮಳೆ ಬೀಳುವ ರೈತರು 1000 ಅಡಿವರೆಗೂ ಕೊಳವೆ ಬಾವಿ ಕೊರೆಯಲು ರೂ.2.0 ಲಕ್ಷದವರೆಗೂ ವೆಚ್ಚ ಮಾಡುತಿದ್ದಾರೆ. ಈ ಕೊಳವೆ ಬಾವಿ ವಿಫಲವಾದರೆ ಅಥವಾ ಕೆಲವು ವರ್ಷಗಳ ನಂತರ ಬತ್ತಿ ಹೋದ ಸಂದರ್ಭದಲ್ಲಿ ರೈತರು ಸಾಲ ಭಾಧೆಗೆ ಸಿಲುಕುತಿದ್ದಾರೆ. ಆದ್ದರಿಂದ ರೈತರು ಕೊಳವೆ ಬಾವಿಯ ಬದಲಾಗಿ ಹೂಡಿಕೆಯನ್ನು ಕೃಷಿಭಾಗ್ಯ ಯೋಜನೆಯ ಘಟಕಗಳಲ್ಲಿ ಹೂಡಿಕೆ ಮಾಡಿ ಸುಸ್ಥಿರ ಕೃಷಿಗಾಗಿ ಬಳಸಬಹುದಾಗಿದೆ. ಕೃಷಿ ಹೊಂಡ ನಿರ್ಮಿಸಿಕೊಳ್ಳಲು ಸರಕಾರ ಶೇ. 90 ರಷ್ಟು ಸಹಾಯಧನ ನೀಡುತ್ತಿದೆ. ತಾಲೂಕಿನಲ್ಲಿ 2024-25 ನೇ ಸಾಲಿನಲ್ಲಿ ಒಟ್ಟು 44 ಕೃಷಿ ಹೊಂಡ ನಿರ್ಮಾಣ ಮಾಡುವ ಗುರಿ ಹೊಂದಿತ್ತು. 44 ರೈತರು ಅರ್ಜಿ ಸಲ್ಲಿಸಿದ್ದರು. ಗುರಿಯಂತೆ 44 ಫಲಾನುಭವಿಗಳು ಕೃಷಿ ಹೊಂಡವನ್ನು ಸರಕಾರದ ಸಹಾಯಧನ ಪಡೆದು ನಿರ್ಮಿಸಿಕೊಂಡಿದ್ದಾರೆ.

ತಾಲೂಕಿನ ಬಹುತೇಕ ರೈತರು ಮಳೆಯ ನೀರನ್ನು ಅವಲಂಬಿತರಾಗಿದ್ದು ಬೇಸಿಗೆಯಲ್ಲಿ ಕೊಳವೆ ಬಾವಿ ನೀರನ್ನು ಅವಲಂಬಿತರಾಗಿದ್ದಾರೆ. ಆದರೆ ಕೊಳವೆ ಬಾವಿ ನೀರಿನಿಂದ ಕೇವಲ 5-6 ಸ್ಪ್ರಿಂಕ್ಲರ್‍ಗಳಿಂದ ನೀರು ಬೆಳೆಗಳಿಗೆ ಹಾಯಿಸಬಹುದಾಗಿದೆ. ಆದರೆ ಕೃಷಿ ಹೊಂಡ ನಿರ್ಮಾಣದಿಂದ ಸರಾಸರಿ 10-15 ಸ್ಪ್ರಿಂಕ್ಲರ್‍ಗಳಿಂದ ನೀರು ಬೆಳೆಗಳಿಗೆ ಹಾಯಿಸಬಹುದಾಗಿದೆ. ಇದರಿಂದ ವಿದ್ಯುಚಕ್ತಿ ಬಳಕೆಯನ್ನು ಕಡಿಮೆ ಮಾಡಬಹುದಾಗಿದೆ. ಹಾಗು ಇಡೀ ಭತ್ತದ ಗದ್ದೆಗೆ ಒಮ್ಮೆಲೇ ನೀರು ಹಾಹಿಸಬಹುದಾಗಿದೆ. ಇದರಿಂದ ಕೂಲಿಕಾರ್ಮಿಕರ ಖರ್ಚು ಕೂಡ ಕಡಿಮೆಯಾಗಿದೆ ಹಾಗು ರೈತರಲ್ಲಿ ಕೃಷಿಯಲ್ಲಿನ ಆಸಕ್ತಿ ಹೆಚ್ಚಿದೆ. ಇಷ್ಟೇ ಅಲ್ಲದೆ ರೈತರು ಕೃಷಿ ಹೊಂಡದಲ್ಲಿ ಮೀನು ಕೃಷಿ ಮಾಡುತ್ತಿದ್ದು ಇದು ರೈತರ ಆದಾಯವನ್ನು ಮತ್ತಷ್ಟು ಹೆಚ್ಚಿಸಬಹುದಾಗಿದೆ. ಮೀನಿನ ತ್ಯಾಜ್ಯ ನೀರು ಸಸ್ಯಗಳಿಗೆ ಪೋಷಕಾಂಶಗಳ ಮೂಲವಾಗಿದೆ ಮೀನಿನ ತ್ಯಾಜ್ಯ ವಿಶೇಷವಾಗಿ ಮಲ ವಸ್ತು ಮತ್ತು ತಿನ್ನದ ಆಹಾರವು ಸಾರಜನಕ, ರಂಜಕ ಮತ್ತು ಪೊಟ್ಯಾಷಿಯಂ ನಂತಹ ಅಗತ್ಯ ಸಸ್ಯ ಪೋಷಕಾಂಶಗಳಿಂದ ಸಮ್ರದ್ದವಾಗಿದೆ, ಇದು ನೈಸರ್ಗಿಕ ಮತ್ತು ಸುಸ್ಥಿರ ಗೊಬ್ಬರವಾಗಿ ಕೃಷಿಗೆ ಬಳಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

4 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

10 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

12 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

13 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago