ಭಾಲಾವಲೀಕಾರ್ ರಾಜಾಪುರ ಸಾರಸ್ವತ ಯುವ ಸಮಾಜ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಗಣೇಶ ಚತುರ್ಥಿ ಪ್ರಯುಕ್ತ ಆಟೋಟ ಹಾಗೂ ಮನೋರಂಜನಾ ಕಾರ್ಯಕ್ರಮವು ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕೃಷ್ಣವೇಷ ಸ್ಪರ್ಧೆ ಹಾಗೂ ಇನ್ನಿತರ ಸ್ಪರ್ಧೆಗಳಲ್ಲಿ ಸಮಾಜ ಬಾಂಧವರು ಆಸಕ್ತಿಯಿಂದ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಸಮಾಜದ ಅನೇಕ ಗಣ್ಯರು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಭಾಗೀರಥಿ ಮುರುಳ್ಯ , ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಣ್ಣಾ ವಿನಯಚಂದ್ರ, ಉದ್ಯಮಿಗಳಾದ ಪೊಸವಳಿಕೆ ಗೋಪಾಲಕೃಷ್ಣ ನಾಯಕ್, ಭಾಲಾವಲೀಕಾರ್ ರಾಜಾಪುರ ಸಾರಸ್ವತ ಸಮಾಜದ ಅಧ್ಯಕ್ಷರಾದ ಹೇಮಂತ್ ಕುಮಾರ್ ಕಂದಡ್ಕ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೇರ್ಪಳ ಇದರ ಅಧ್ಯಕ್ಷರಾದ ದೇವದಾಸ್ ಪ್ರಭು, ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಮಂಡಳಿ ಸುಳ್ಯ ಇದರ ಅಧ್ಯಕ್ಷರಾದ ಅನಿತಾ ಕಾಯರ್ತೋಡಿ ಮುಂತಾದವರು ಭಾಗವಹಿಸಿದ್ದರು.
ಶಾಸಕರಿಗೆ ಸಮಾಜದ ವತಿಯಿಂದ ಅಭಿನಂದನಾ ಕಾರ್ಯಕ್ರಮವು ನಡೆಯಿತು. 2022-23ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಸುಳ್ಯ ತಾಲೂಕಿನ ಸ್ವಸಮಾಜದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಸಮಾಜ ಬಾಂಧವರ ಆಸಕ್ತಿ ಹಾಗೂ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಉತ್ತರ ಮಹಾರಾಷ್ಟ್ರ ಕರಾವಳಿ ತಲುಪಿದ್ದು, ಇನ್ನೆರಡು ದಿನಗಳಲ್ಲಿ…
ಮಾವು ಉತ್ಪಾದನೆಯಲ್ಲಿ ರಾಜ್ಯದಲ್ಲೇ ಎರಡನೇ ಸ್ಥಾನ ಪಡೆದಿರುವ ರಾಮನಗರ ಜಿಲ್ಲೆಯಲ್ಲಿ ಈ ಬಾರಿ…
ಶಾಲೆಯ ಯೋಜಿತ ಮತ್ತು ಪರಿಣಾಮಕಾರಿ ಆರಂಭಕ್ಕೆ ವಿದ್ಯಾರ್ಥಿ – ಪೋಷಕ – ಶಿಕ್ಷಕ …
ಬಡವರಿಗೆ, ಹಳ್ಳಿಗರಿಗೆ, ದಲಿತರಿಗೆ, ನಿರಕ್ಷಕ ಕುಕ್ಷಿಗಳಿಗೆ, ನಿರುದ್ಯೋಗಿಗಳಿಗೆ ಸಮಾನತೆಯೆಂಬುದು ಮತದಾನದ ಸಂದರ್ಭದಲ್ಲಿ ಮಾತ್ರವೇ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳಲ್ಲಿ ಸಂಪರ್ಕಿಸಿ 9535156490
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು…