Advertisement
MIRROR FOCUS

ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ | ರಾಜ್ಯದ ಕೃಷ್ಣಾನದಿ ಪಾತ್ರದ  ಜಿಲ್ಲೆಗಳು ಜಲಾವೃತ

Share

ಮಹಾರಾಷ್ಟ್ರದಲ್ಲಿ ಧಾರಕಾರ ಮಳೆಯಾಗುತ್ತಿರುವುದರಿಂದ ಉಜನಿ ಆಣೆಕಟ್ಟೆಯಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಯಾದಗಿರಿ ನಗರದ ಭೀಮಾ ನದಿ ತುಂಬಿ ಹರಿಯುತ್ತಿದೆ. ಉಜಿನಿ ಜಲಾಶಯದಿಂದ 2.54 ಲಕ್ಷ ಕ್ಯೂಸೆಕ್ ನೀರು ಹರಿ ಬಿಡಲಾಗುತ್ತಿದೆ. ಇದರಿಂದ ಸನ್ನತಿ ಬ್ರಿಡ್ಜ್ ಕಂ ಬ್ಯಾರೇಜ್ ನಿಂದಲೂ 3.50 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಗಿದೆ.  ಕ್ರಸ್ಟ್ ಗೇಟ್‌ಗಳನ್ನು ಮೇಲಕ್ಕೆ ಎತ್ತಿ ನೀರು ಹರಿಸಲಾಗುತ್ತಿದೆ. ಇದರಿಂದ ನದಿ ಪಾತ್ರದ ಎರಡೂ ಕಡೆಯ ಜಮೀನುಗಳಿಗೆ ನೀರು ನುಗ್ಗಿದೆ. ಹಳ್ಳಗಳಿಗೂ ಪ್ರವಾಹದ ನೀರು ವ್ಯಾಪಿಸಿಕೊಂಡು ಬೆಳೆದು ನಿಂತ ಭತ್ತ, ಹತ್ತಿ, ತೊಗರಿ ಬೆಳೆಗಳು ಜಲಾವೃತವಾಗಿದೆ. 3.50 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಸುತ್ತಿರುವುದರಿಂದ ಹೆಡಗಿಮದ್ರಾ, ತಳಕ, ಮುಷ್ಟುರು, ಮಲ್ಹಾರ್, ಆನೂರು, ಗೌಡೂರು, ಹನೂರು (ಕೆ), ಭೀಮನಳ್ಳಿ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜಮೀನುಗಳಿಗೆ ನೀರು ನುಗ್ಗಿದೆ ಎಂದು ಯಾದಗಿರಿ ತಹಶೀಲ್ದಾರ್  ಸುರೇಶ ಅಂಕಲಗಿ ತಿಳಿಸಿದ್ದಾರೆ.

ಜನರು ನದಿ, ಹಳ್ಳಗಳಿಗೆ ಇಳಿಯಬಾರದು ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಮನವಿ ಮಾಡಿದ್ದಾರೆ.  ಶೀಘ್ರವೇ ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲಾಗುವುದು ಎಂದು ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ತಿಳಿಸಿದ್ದಾರೆ.   ವಡಗೇರಾ ತಾಲ್ಲೂಕಿನ ಜೋಳದಡಗಿ, ಶಿವನೂರು ಗ್ರಾಮದಲ್ಲಿ ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭೀಮಾನದಿಗೆ 3.50 ಲಕ್ಷ ಕ್ಯೂಸೆಕ್ ನೀರು ಬಿಟ್ಟಿದ್ದರಿಂದ ಯಾದಗಿರಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ 22 ಕ್ಕೂ ಹೆಚ್ಚು ಗ್ರಾಮಗಳಲ್ಲಿನ ಬೆಳೆ ಹಾನಿಯಾಗಿದೆ. ಸಮೀಕ್ಷೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.  ಹೆಚ್ಚಿನ ಬೆಳೆ ಪರಿಹಾರಕ್ಕಾಗಿ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದ ಶಾಸಕ ಶರಣಗೌಡ ಕಂದಕೂರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago