“ಕೃಷ್ಣಂ ವಂದೇ ಜಗದ್ಗುರುಂ” | ಕೃಷ್ಣಾಷ್ಟಮಿಯ  ಸಡಗರ-ಸಂಭ್ರಮ |

August 30, 2021
6:56 AM

ಪ್ರಸನ್ನ ಪಾರಿಜಾತಾಯ ತೋತ್ರವೇತ್ರೈಕೃಪಾಣಯೇ ,
ಜ್ಞಾನಮುದ್ರಾಯ ಕೃಷ್ಣಾಯ ಗೀತಮೃತದುಹೇ ನಮಃ”

Advertisement
Advertisement
Advertisement
Advertisement

ಆಶ್ರಯ ಬಯಸಿದವರಿಗೆ ಪಾರಿಜಾತದಂತಹ ಕಲ್ಪವೃಕ್ಷವಾಗಿರುವ, ಒಂದು ಕೈಯಲ್ಲಿ ಚಾವಟಿಗೆಯನ್ನು ಹಿಡಿದಿರುವ, ಮತ್ತೊಂದು ಕೈಯಲ್ಲಿ ಜ್ಞಾನಮುದ್ರೆಯನ್ನು ತೋರಿಸುತ್ತಿರುವ ಗೀತೆಯೆಂಬ ಅಮೃತವನ್ನು  ಕರೆದಿರುವ ಕೃಷ್ಣನಿಗೆ ನಮಸ್ಕಾರ. ಎಂಬುದು ಶ್ರೀ ಮಧುಸೂದನ ಸರಸ್ವತಿಯವರು ರಚಿಸಿದ  ಮೇಲಿನ ಶ್ಲೋಕದ ತಾತ್ಪರ್ಯ.

Advertisement

ಕೃಷ್ಣನೆಂದರೆ  ಗುಡಿಯೊಳಗಿರುವ ಭಗವಂತನೆಂದು  ಅನಿಸದು. ಅವ ನಮ್ಮೊಳಗೆ ಇರುವವ, ನಮ್ಮವನೆಂದೇ ಅನಿಸುವುದು.   ಮುರಾರಿಯ ಹುಡುಕಿ ಊರೂರು ಅಲೆಯ ಬೇಕಾಗಿಲ್ಲ. ನಾವೆಲ್ಲಿರುವೆವೋ ಅಲ್ಲೇ ಅವನಿರವು ಅಲ್ಲವೇ? ಬಕುತಿಯಲಿ ಮಾಡುವೆಲ್ಲಾ ಕಾರ್ಯಗಳಲ್ಲೂ ಭಗವಂತನೇ ಇರುವಾಗ   ಹುಡುಕಿಕೊಂಡು ಅಲೆಯುವುದರಲ್ಲಿ ಅರ್ಥವಿಲ್ಲವಲ್ಲವೇ?

ಮನದೊಡೆಯಾನಾದ ಕೃಷ್ಣನ  ಹುಟ್ಟು  ಹಬ್ಬವನ್ನು  ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯೆಂದು ನಾವು  ಸಂಭ್ರಮದಿಂದ ಆಚರಿಸುತ್ತೇವೆ.  ದೇವಕಿ, ವಾಸುದೇವರ ಪುತ್ರ ಕೃಷ್ಣ ಹುಟ್ಟಿನಿಂದಲೇ ತನ್ನ ಚಮತ್ಕಾರಗಳನ್ನು ತೋರಿಸಿದವ.  ಮುರಾರಿಯೆಂದರೆ  ಮಕ್ಕಳಿಂದ ಹಿರಿಯರವರೆಗೂ  ಆತ್ಮೀಯನೇ ಅಲ್ಲವೇ?   ಗಣೇಶನನ್ನೆಷ್ಟು ಆರಾಧಿಸುತ್ತೇವೆಯೋ ಮುಕುಂದನನ್ನು  ಅಷ್ಟೇ ಪ್ರೀತಿಸುತ್ತೇವೆ.    ರಾಮಾಯಣ ಮಹಾಭಾರತದ ಕಥೆಗಳನ್ನು ಬಾಲ್ಯದಲ್ಲಿ ಕೇಳಿ ಹ್ಯಾಗೆ ಆನಂದಿಸಿದೆವೋ ಹಾಗೇ  ಗಿರಧಾರಿಯ ಕಥಾನಕವನ್ನು ಇಷ್ಟ ಪಟ್ಟು ಕೇಳಿದ್ದು ನಿಜವೇ ತಾನೇ?

Advertisement

ಪ್ರತಿಯೊಂದು ಹೆಜ್ಜೆಯಲ್ಲೂ  ಕಷ್ಟಗಳನ್ನೇ  ಉಣ್ಣುತ್ತಾ , ಅವುಗಳನ್ನು ನಿಭಾಯಿಸುತ್ತಾ ಭಕ್ತರ ಕಷ್ಟಗಳಿಗೆ ಸ್ಪಂದಿಸಿ ಯದುಪತಿ ಈತ. ಹೆಜ್ಜೆ ಹೆಜ್ಜೆಗೆ ಎದುರಾಗುತ್ತಿದ್ದ ರಕ್ಕಸರ  ಸಂಹರಿಸಿದ  ಯದುವಂಶಿ . ಕೃಷ್ಣ  ಎಲ್ಲರಿಗೂ ಇಷ್ಟವಾಗುವಂತವ. ಅವನು  ದೇವರಾದರೂ ನಮ್ಮ ನಿಮ್ಮೆಲ್ಲರಂತೆ.  ಸ್ವಯಂ ಶಕ್ತಿವಂತನಾದರೂ ಎಲ್ಲೂ ಅನಗತ್ಯ ಪ್ರದರ್ಶನ ಮಾಡದೆ  ಅಗತ್ಯವಿದ್ದಾಗ ಪ್ರಯೋಗಿಸುವವ. ಯಾರು ಸಂಪೂರ್ಣ ಆತನಿಗೆ ಶರಣಾಗುತ್ತರೋ ಅವರನ್ನು ಸದಾ ಕಾಯುವವ.  ಕಷ್ಟಗಳು ಬಂದಾಗ , ನೆನೆದವರ ಮನದಲ್ಲಿ ನಾ ಬಂದೆ ಎಂದು ಅಲ್ಲಿರುವ ಸಖನೀತ.

ಬದುಕಿನ  ದುಃಖದ ಕ್ಷಣದಲ್ಲಿ ಎಲ್ಲರನ್ನು ನೆನಪಿಸಿ ಕೊಳ್ಳುತ್ತೇವೆ. ಆದರೆ ಖುಷಿಯಲ್ಲಿದ್ದಾಗಲೂ ನೆನಪಾಗುವವರು, ಮನಸ್ಸಿಗೆ  ಹತ್ತಿರದವರು. ಅಚ್ಯುತ ಕಷ್ಟದಲ್ಲೂ, ಖುಷಿಯಲ್ಲೂ  ನೆನಪಾಗುವವ. ಅವನ ಹುಟ್ಟು ಹಬ್ಬವೆಂದರೆ ಸಂಭ್ರಮವಲ್ಲವೆ?  ತಿಂಡಿಗಳೆಂದರೆ  ,ಅದರಲ್ಲೂ ಸಿಹಿಯೆಂದರೆ ಬಲು ಇಷ್ಟ. ಕೃಷ್ಣಾಷ್ಟಮಿಯಂದು  ತರತರಹದ ಉಂಡೆಗಳು , ಚಕ್ಕುಲಿಗಳು, ಉದ್ದಿನ ಕಡುಬು, ಪಾಯಸ , ರಸಾಯನ , ಹಾಲು, ಬೆಣ್ಣೆ , ಮೊಸರು ಹೀಗೆ ಬಗೆಬಗೆಯ ನೈವೇದ್ಯವನ್ನು ಸಮರ್ಪಿಸುವುದು  ಮೆಚ್ಚಿನ ಕೆಲಸ.  ಬಹಳ ನಿರೀಕ್ಷಿಸಿ ಆಚರಿಸುವ ತಿಂಡಿಗಳ ಹಬ್ಬವೇ ಅಷ್ಟಮಿ.

Advertisement

ಎಲ್ಲರಿಗೂ ಅಷ್ಟಮಿ  ಹಬ್ಬದ ಶುಭಾಶಯಗಳು

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |
February 8, 2025
7:48 AM
by: The Rural Mirror ಸುದ್ದಿಜಾಲ
ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ
February 8, 2025
7:38 AM
by: The Rural Mirror ಸುದ್ದಿಜಾಲ
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ
February 8, 2025
7:29 AM
by: The Rural Mirror ಸುದ್ದಿಜಾಲ
ಕಪ್ಪತ ಗುಡ್ಡ ರಕ್ಷಣೆ ಕುರಿತು ಜಾಗೃತಿ | ಗುಡ್ಡದ ತಪ್ಪಲಿನ ಗ್ರಾಮಗಳಲ್ಲಿ ಜನಜಾಗೃತಿ
February 7, 2025
7:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror