Advertisement
MIRROR FOCUS

“ಕೃಷ್ಣಂ ವಂದೇ ಜಗದ್ಗುರುಂ” | ಕೃಷ್ಣಾಷ್ಟಮಿಯ  ಸಡಗರ-ಸಂಭ್ರಮ |

Share

ಪ್ರಸನ್ನ ಪಾರಿಜಾತಾಯ ತೋತ್ರವೇತ್ರೈಕೃಪಾಣಯೇ ,
ಜ್ಞಾನಮುದ್ರಾಯ ಕೃಷ್ಣಾಯ ಗೀತಮೃತದುಹೇ ನಮಃ”

ಆಶ್ರಯ ಬಯಸಿದವರಿಗೆ ಪಾರಿಜಾತದಂತಹ ಕಲ್ಪವೃಕ್ಷವಾಗಿರುವ, ಒಂದು ಕೈಯಲ್ಲಿ ಚಾವಟಿಗೆಯನ್ನು ಹಿಡಿದಿರುವ, ಮತ್ತೊಂದು ಕೈಯಲ್ಲಿ ಜ್ಞಾನಮುದ್ರೆಯನ್ನು ತೋರಿಸುತ್ತಿರುವ ಗೀತೆಯೆಂಬ ಅಮೃತವನ್ನು  ಕರೆದಿರುವ ಕೃಷ್ಣನಿಗೆ ನಮಸ್ಕಾರ. ಎಂಬುದು ಶ್ರೀ ಮಧುಸೂದನ ಸರಸ್ವತಿಯವರು ರಚಿಸಿದ  ಮೇಲಿನ ಶ್ಲೋಕದ ತಾತ್ಪರ್ಯ.

Advertisement

ಕೃಷ್ಣನೆಂದರೆ  ಗುಡಿಯೊಳಗಿರುವ ಭಗವಂತನೆಂದು  ಅನಿಸದು. ಅವ ನಮ್ಮೊಳಗೆ ಇರುವವ, ನಮ್ಮವನೆಂದೇ ಅನಿಸುವುದು.   ಮುರಾರಿಯ ಹುಡುಕಿ ಊರೂರು ಅಲೆಯ ಬೇಕಾಗಿಲ್ಲ. ನಾವೆಲ್ಲಿರುವೆವೋ ಅಲ್ಲೇ ಅವನಿರವು ಅಲ್ಲವೇ? ಬಕುತಿಯಲಿ ಮಾಡುವೆಲ್ಲಾ ಕಾರ್ಯಗಳಲ್ಲೂ ಭಗವಂತನೇ ಇರುವಾಗ   ಹುಡುಕಿಕೊಂಡು ಅಲೆಯುವುದರಲ್ಲಿ ಅರ್ಥವಿಲ್ಲವಲ್ಲವೇ?

ಮನದೊಡೆಯಾನಾದ ಕೃಷ್ಣನ  ಹುಟ್ಟು  ಹಬ್ಬವನ್ನು  ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯೆಂದು ನಾವು  ಸಂಭ್ರಮದಿಂದ ಆಚರಿಸುತ್ತೇವೆ.  ದೇವಕಿ, ವಾಸುದೇವರ ಪುತ್ರ ಕೃಷ್ಣ ಹುಟ್ಟಿನಿಂದಲೇ ತನ್ನ ಚಮತ್ಕಾರಗಳನ್ನು ತೋರಿಸಿದವ.  ಮುರಾರಿಯೆಂದರೆ  ಮಕ್ಕಳಿಂದ ಹಿರಿಯರವರೆಗೂ  ಆತ್ಮೀಯನೇ ಅಲ್ಲವೇ?   ಗಣೇಶನನ್ನೆಷ್ಟು ಆರಾಧಿಸುತ್ತೇವೆಯೋ ಮುಕುಂದನನ್ನು  ಅಷ್ಟೇ ಪ್ರೀತಿಸುತ್ತೇವೆ.    ರಾಮಾಯಣ ಮಹಾಭಾರತದ ಕಥೆಗಳನ್ನು ಬಾಲ್ಯದಲ್ಲಿ ಕೇಳಿ ಹ್ಯಾಗೆ ಆನಂದಿಸಿದೆವೋ ಹಾಗೇ  ಗಿರಧಾರಿಯ ಕಥಾನಕವನ್ನು ಇಷ್ಟ ಪಟ್ಟು ಕೇಳಿದ್ದು ನಿಜವೇ ತಾನೇ?

Advertisement

ಪ್ರತಿಯೊಂದು ಹೆಜ್ಜೆಯಲ್ಲೂ  ಕಷ್ಟಗಳನ್ನೇ  ಉಣ್ಣುತ್ತಾ , ಅವುಗಳನ್ನು ನಿಭಾಯಿಸುತ್ತಾ ಭಕ್ತರ ಕಷ್ಟಗಳಿಗೆ ಸ್ಪಂದಿಸಿ ಯದುಪತಿ ಈತ. ಹೆಜ್ಜೆ ಹೆಜ್ಜೆಗೆ ಎದುರಾಗುತ್ತಿದ್ದ ರಕ್ಕಸರ  ಸಂಹರಿಸಿದ  ಯದುವಂಶಿ . ಕೃಷ್ಣ  ಎಲ್ಲರಿಗೂ ಇಷ್ಟವಾಗುವಂತವ. ಅವನು  ದೇವರಾದರೂ ನಮ್ಮ ನಿಮ್ಮೆಲ್ಲರಂತೆ.  ಸ್ವಯಂ ಶಕ್ತಿವಂತನಾದರೂ ಎಲ್ಲೂ ಅನಗತ್ಯ ಪ್ರದರ್ಶನ ಮಾಡದೆ  ಅಗತ್ಯವಿದ್ದಾಗ ಪ್ರಯೋಗಿಸುವವ. ಯಾರು ಸಂಪೂರ್ಣ ಆತನಿಗೆ ಶರಣಾಗುತ್ತರೋ ಅವರನ್ನು ಸದಾ ಕಾಯುವವ.  ಕಷ್ಟಗಳು ಬಂದಾಗ , ನೆನೆದವರ ಮನದಲ್ಲಿ ನಾ ಬಂದೆ ಎಂದು ಅಲ್ಲಿರುವ ಸಖನೀತ.

ಬದುಕಿನ  ದುಃಖದ ಕ್ಷಣದಲ್ಲಿ ಎಲ್ಲರನ್ನು ನೆನಪಿಸಿ ಕೊಳ್ಳುತ್ತೇವೆ. ಆದರೆ ಖುಷಿಯಲ್ಲಿದ್ದಾಗಲೂ ನೆನಪಾಗುವವರು, ಮನಸ್ಸಿಗೆ  ಹತ್ತಿರದವರು. ಅಚ್ಯುತ ಕಷ್ಟದಲ್ಲೂ, ಖುಷಿಯಲ್ಲೂ  ನೆನಪಾಗುವವ. ಅವನ ಹುಟ್ಟು ಹಬ್ಬವೆಂದರೆ ಸಂಭ್ರಮವಲ್ಲವೆ?  ತಿಂಡಿಗಳೆಂದರೆ  ,ಅದರಲ್ಲೂ ಸಿಹಿಯೆಂದರೆ ಬಲು ಇಷ್ಟ. ಕೃಷ್ಣಾಷ್ಟಮಿಯಂದು  ತರತರಹದ ಉಂಡೆಗಳು , ಚಕ್ಕುಲಿಗಳು, ಉದ್ದಿನ ಕಡುಬು, ಪಾಯಸ , ರಸಾಯನ , ಹಾಲು, ಬೆಣ್ಣೆ , ಮೊಸರು ಹೀಗೆ ಬಗೆಬಗೆಯ ನೈವೇದ್ಯವನ್ನು ಸಮರ್ಪಿಸುವುದು  ಮೆಚ್ಚಿನ ಕೆಲಸ.  ಬಹಳ ನಿರೀಕ್ಷಿಸಿ ಆಚರಿಸುವ ತಿಂಡಿಗಳ ಹಬ್ಬವೇ ಅಷ್ಟಮಿ.

Advertisement

ಎಲ್ಲರಿಗೂ ಅಷ್ಟಮಿ  ಹಬ್ಬದ ಶುಭಾಶಯಗಳು

# ಅಶ್ವಿನಿಮೂರ್ತಿ ಅಯ್ಯನಕಟ್ಟೆ

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

21 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

23 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago