Advertisement
MIRROR FOCUS

ಕಾವೇರಿ ಜಲಾನಯನದಲ್ಲಿ ತಗ್ಗಿದ ಮಳೆ | ಕೆಆರ್‌ಎಸ್‌ ಡ್ಯಾಂ ಒಳಹರಿವು ಇಳಿಕೆ | ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ – ಸಿಎಂ ಖಡಕ್‌‌ ಮಾತು |

Share

ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಪರಿಣಾಮವಾಗಿ ಕೆಆರ್‌ಎಸ್‌ ಡ್ಯಾಂ (KRS Dam) ಒಳಹರಿವು ಪ್ರಮಾಣ ಇಳಿಕೆಯಾಗಿದೆ. ನಿನ್ನೆ 4,673 ಕ್ಯೂಸೆಕ್ ಇದ್ದ ಒಳಹರಿವು ಈಗ 3,406 ಕ್ಯೂಸೆಕ್‌ಗೆ ಇಳಿಕೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 104.60 ಅಡಿ ನೀರು ಸಂಗ್ರಹವಾಗಿದೆ. ಈ ಮಧ್ಯೆ ತಮಿಳುನಾಡಿಗೆ ನೀರು ಬಿಡುಗಡೆಗೆ ಆದೇಶವನ್ನು ಕಾವೇರಿ ನೀರು ನಿಯಂತ್ರಣಾ ಸಮಿತಿ ಮಾಡಿದೆ. ನಮ್ಮ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 60 ಟಿಎಂಸಿ ನೀರು ಮಾತ್ರ ಇದೆ. ನಮಗೆ ಕುಡಿಯಲು, ಬೇಸಾಯಕ್ಕೆ ನೀರಿನ ಅಗತ್ಯವಿದೆ. ಹೀಗಾಗಿ ಜುಲೈ ವರೆಗೂ ನೀರು (Cauvery Water) ಕೊಡಲು ಸಾಧ್ಯವಿಲ್ಲ ಅಂತ ಹೇಳಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ನಿನ್ನೆ ಆದೇಶದ ವಿರುದ್ಧ ನಾವು ಅಪೀಲ್ ಹಾಕ್ತಿದ್ದೇವೆ ಎಂದು ಖಡಕ್ಕಾಗಿ ಹೇಳಿದ್ದಾರೆ.

ಜುಲೈ 31ರ ವರೆಗೆ ತಮಿಳುನಾಡಿಗೆ (Tamil Nadu) ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ (CWRC) ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ತುರ್ತು ಸಭೆ ನಡೆಸಿದರು. ಜಲ ಸಂಪನ್ಮೂಲ ಇಲಾಖೆಯೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ಇಲಾಖೆಯ ಹಿರಿಯ ಅಧಿಕಾರಿಗಳು, ಕಾವೇರಿ ಕಣಿವೆ ಭಾಗದ ಸಚಿವರು ಭಾಗವಹಿಸಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಸಿಎಂ ಮಾತನಾಡಿದರು.

ಕಾವೇರಿ ನೀರು ನೀರಾವರಿ ನಿಯಂತ್ರಣಾ ಸಮಿತಿ ನಿತ್ಯ 1 ಟಿಎಂಸಿ ನೀರು ತಮಿಳುನಾಡಿಗೆ ಬಿಡಲು ಸೂಚನೆ ನೀಡಿದೆ. ಆದ್ರೆ ಇಂದಿನ ಸಭೆಯಲ್ಲಿ ನಾವು ಪರಿಸ್ಥಿತಿ ವಿವರಿಸಿದ್ದೇವೆ. ಆದರೂ ಸಹ, ಮಳೆಯಿದ್ದರೂ ಈವರೆಗೆಗೆ 28% ನೀರು ಕೊರತೆ ನಮಗೆ ಇದೆ.ಇದನ್ನ ನಾವು ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ನಮ್ಮ ನಿಲುವನ್ನೂ ಹೇಳಿದ್ದೇವೆ. ಯಾವುದೇ ತೀರ್ಮಾನ ಮಾಡಬಾರದು ಅಂತ ಮನವಿ ಮಾಡಿದ್ದೇವೆ. ಜುಲೈ ಕೊನೆವರೆಗೂ ಪರಿಸ್ಥಿತಿ ನೋಡಿಕೊಳ್ಳಬೇಕು ಅಂತ ಮನವಿ ಮಾಡಿದ್ದೇವೆ. ಇದರ ಹೊರತಾಗಿಯೂ ಸಿಡಬ್ಲ್ಯೂಆರ್‌ಸಿ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಹೇಳಿದೆ ಎಂದು ವಿವರಿಸಿದ್ದಾರೆ. ಕಳೆದ ಮೂರು ದಿನಗಳಿಂದ ಕಬಿನಿ ಜಲಾಶಯದಿಂದ ನೀರು ಬಿಡುತ್ತಿದ್ದೇವೆ. ಕಬಿನಿಗೆ ಎಷ್ಟು ಒಳಹರಿವು ಇದೆಯೋ, ಅಷ್ಟೇ ಹೊರಹರಿವು ಸಹ ಬಿಡ್ತಿದ್ದೇವೆ. ಕಬಿನಿ ಜಲಾಶಯ 96% ತುಂಬಿರುವ ಕಾರಣ ನೀರು ಹರಿಸುತ್ತಿದ್ದೇವೆ ಎಂದು ವಿವರಿಸಿದ್ದಾರೆ.

ಮೇಲ್ಮನವಿ ಸಲ್ಲಿಸಲು ನಿರ್ಧಾರ: ಸಿಡಬ್ಲ್ಯೂಆರ್‌ಸಿ ಆದೇಶದ ವಿರುದ್ಧವಾಗಿ ಅಪೀಲು ಹಾಕಲು ನಿರ್ಧಾರ ಮಾಡಿದ್ದೇವೆ. ನೀರು ಬಿಡಲು ಆಗೊಲ್ಲ ಅಂತ ಅಪೀಲ್ ಹಾಕಲು ನಿರ್ಧಾರ. ಕಾವೇರಿ ರಿವರ್ ಮ್ಯಾನೇಜ್ಮೆಂಟ್ ಅಥಾರಿಟಿ ಮುಂದೆ ಮೇಲ್ಮನವಿ ಹಾಕಲು ನಿರ್ಧಾರ ಮಾಡಿದ್ದೇವೆ.

ಜು.14ರಂದು ಸರ್ವಪಕ್ಷ ಸಭೆ: ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಹಾಗಾಗಿ ಜುಲೈ 14ರ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆಯಲು ನಿರ್ಧಾರ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯ ನೇತೃತ್ವ ವಹಿಸಲಿದ್ದಾರೆ. ನಾನೂ ಸಭೆಯಲ್ಲಿ ಭಾಗವಹಿಸುತ್ತೇನೆ. ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

3 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

4 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

10 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

10 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

12 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

13 hours ago