30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ

December 30, 2024
6:46 AM

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆ.ಆರ್.ಎಸ್ ಜಲಾಶಯ ಡಿಸೆಂಬರ್‌ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ ಭರ್ತಿಯಾಗಿ ದಾಖಲೆ ಬರೆದಿದೆ.

Advertisement

49.457  ಅಡಿ ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಅಣೆಕಟ್ಟೆಯಲ್ಲಿ, ಪ್ರಸ್ತುತ ಅಷ್ಟೇ ಪ್ರಮಾಣದ ನೀರಿನ ಸಂಗ್ರಹವಿದೆ. ತಮಿಳುನಾಡಿಗೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಈ ಬಾರಿ ಬಿಡಲಾಗಿದೆ.  ಕೇರಳದ ಕೆಲವು ಭಾಗ, ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕೆಆರ್‌ಎಸ್ ಡ್ಯಾಂಗೆ ಉತ್ತಮ ಒಳಹರಿವು ಬಂದಿದೆ. ಕಳೆದ ವರ್ಷ ಅಣೆಕಟ್ಟೆಗೆ 136 ಹೊಸ ಗೇಟುಗಳನ್ನು ಅಳವಡಿಸಿದ ಪರಿಣಾಮ ನಿತ್ಯ ಪೋಲಾಗುತ್ತಿದ್ದ 1 ಸಾವಿರ ಕ್ಯುಸೆಕ್ ನೀರನ್ನು ತಡೆಗಟ್ಟಲಾಗಿದೆ.31 ಕಿಲೋಮೀಟರ್  ಉದ್ದದ ನಾಲೆಗಳ ಆಧುನೀಕರಣ ಕಾಮಗಾರಿ ಹಾಗೂ ನೀರುಗಂಟಿಗಳು ಅತ್ಯುತ್ತಮವಾಗಿ ನೀರು ನಿರ್ವಹಣೆ ಮಾಡಿರುವುದು ಸೇರಿದಂತೆ ಇತರ ಕಾರಣಗಳಿಂದಾಗಿ ಕನ್ನಂಬಾಡಿ ಅಣೆಕಟ್ಟೆಯು ಡಿಸೆಂಬರ್ ಅಂತ್ಯದಲ್ಲೂ ಭರ್ತಿಯಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಂಡಿಪುರ ಅರಣ್ಯದಲ್ಲಿ ವಾಹನಗಳ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ಚರ್ಚಿಸಿ ನಿರ್ಧಾರ | ಅರಣ್ಯ ಸಚಿವ ಈಶ್ವರ್ ಖಂಡ್ರೆ
March 29, 2025
9:58 AM
by: The Rural Mirror ಸುದ್ದಿಜಾಲ
ಬೇಸಿಗೆ ಹಿನ್ನೆಲೆ | ರಾಜ್ಯದ ಜಲಾಶಯಗಳಿಂದ ಕುಡಿಯುವ ನೀರು ಬಿಡುಗಡೆ ಕುರಿತು ಚರ್ಚೆ
March 29, 2025
9:54 AM
by: The Rural Mirror ಸುದ್ದಿಜಾಲ
ವಿಶೇಷ ಕಾಫಿ ಉತ್ಪನ್ನಗಳ ಬಿಡುಗಡೆ | ಡಿಪ್ ಕಾಫಿ ಬ್ಯಾಗ್ ಗಳನ್ನು ಪರಿಚಯಿಸಿದ ಕಾಫಿ ಬೋರ್ಡ್
March 29, 2025
9:49 AM
by: The Rural Mirror ಸುದ್ದಿಜಾಲ
ರಸಗೊಬ್ಬರಗಳ ಬೆಲೆ ಸ್ಥಿರವಾಗಿರಿಸಲು ಕ್ರಮ | 45 ಕೆ.ಜಿ. ಯೂರಿಯಾ ಬೆಲೆ 242 ರೂ.ಗೆ ನಿಗದಿ
March 29, 2025
9:39 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group