ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುವುದೇ ಈಗ ಆತಂಕಕ್ಕೆ ಕಾರಣವಾಗಿದೆ.
ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಸದ್ಯ ಕೆಆರ್ಎಸ್ ಡ್ಯಾಂನಲ್ಲಿ 82 ಅಡಿ ನೀರು ಸಂಗ್ರಹವಾಗಿದೆ.
ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್ಎಸ್ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು. ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ.
ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರು ಮಾತ್ರ ಸಂಗ್ರಹವಾಗಿದೆ. ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಕಳೆದ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿತ್ತು.
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…