ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯುವುದೇ ಈಗ ಆತಂಕಕ್ಕೆ ಕಾರಣವಾಗಿದೆ.
ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಸದ್ಯ ಕೆಆರ್ಎಸ್ ಡ್ಯಾಂನಲ್ಲಿ 82 ಅಡಿ ನೀರು ಸಂಗ್ರಹವಾಗಿದೆ.
ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್ಎಸ್ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು. ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ.
ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರು ಮಾತ್ರ ಸಂಗ್ರಹವಾಗಿದೆ. ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಕಳೆದ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿತ್ತು.
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಮಿಲ್ಲೆಟ್ಸ್ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…