Advertisement
ಪ್ರಮುಖ

100 ಅಡಿಗೆ ತಲುಪಿದ KRS ಡ್ಯಾಂ ನೀರಿನ ಮಟ್ಟ | ಭಾರಿ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು |

Share

ಮುಂಗಾರು ಮಳೆ ಅಬ್ಬರ ಜೋರಾಗುತ್ತಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದ ಕಳೆದ 48 ಗಂಟೆಯಲ್ಲಿ 5 ಟಿಎಂಸಿಯಷ್ಟು ನೀರು ಹರಿದುಬಂದಿದ್ದು, ಬರೋಬ್ಬರಿ 100 ಅಡಿ ನೀರು ಭರ್ತಿಯಾಗಿದೆ.

ಕಾವೇರಿ ಜಲಾನಯನ #cauverybasin ಪ್ರದೇಶದಲ್ಲಿ ಉತ್ತಮವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂ ಒಳಹರಿವಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೀಗಾಗಿ 48 ಗಂಟೆಯ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂಗೆ 5 TMC ನೀರು ಹರಿದುಬಂದಿದೆ. ಕೇವಲ 2 ದಿನಗಳ ಅವಧಿಯಲ್ಲಿ 8 ಅಡಿ ಡ್ಯಾಂ ನೀರು ಭರ್ತಿಯಾಗಿದೆ.

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಮಳೆಯಿಲ್ಲದೇ ಕಂಗಾಲಾಗಿದ್ದ ಸಕ್ಕರೆ ನಾಡಿನ ರೈತರು, ಇದೀಗ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.

ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವಿದ್ದು, ಇಂದು ಇನ್ನಷ್ಟು ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಕಳೆದ 48 ಗಂಟೆಗಳಲ್ಲಿ 5 ಟಿಎಂಸಿ ನೀರು ಹರಿದುಬಂದಿದ್ದು, ಒಟ್ಟು 22.809 ಟಿಎಂಸಿ ನೀರು ಡ್ಯಾಂನಲ್ಲಿ ಶೇಖರಣೆಯಾಗಿದೆ. ನೀರಿನ ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಇನ್ನೂ 10 ದಿನಗಳಲ್ಲಿ ಡ್ಯಾಂ ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.

ಹಾರಂಗಿಯಿಂದ 30,000 ಕ್ಯೂಸೆಕ್ ನೀರು ಬಿಡುಗಡೆ: ಕೊಡಗೂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ (Cauvery River) ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಹಾರಂಗಿ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕುಶಾಲನಗರ ಸುತ್ತಮುತ್ತಲಿನ ಬಡಾವಣೆಗಳತ್ತ ಹರಿದ ನೀರು ಹರಿದು ಬಂದಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

2 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

3 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

4 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

5 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

18 hours ago