ಮುಂಗಾರು ಮಳೆ ಅಬ್ಬರ ಜೋರಾಗುತ್ತಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದ ಕಳೆದ 48 ಗಂಟೆಯಲ್ಲಿ 5 ಟಿಎಂಸಿಯಷ್ಟು ನೀರು ಹರಿದುಬಂದಿದ್ದು, ಬರೋಬ್ಬರಿ 100 ಅಡಿ ನೀರು ಭರ್ತಿಯಾಗಿದೆ.
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಮಳೆಯಿಲ್ಲದೇ ಕಂಗಾಲಾಗಿದ್ದ ಸಕ್ಕರೆ ನಾಡಿನ ರೈತರು, ಇದೀಗ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.
ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವಿದ್ದು, ಇಂದು ಇನ್ನಷ್ಟು ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್ಎಸ್ ಕಳೆದ 48 ಗಂಟೆಗಳಲ್ಲಿ 5 ಟಿಎಂಸಿ ನೀರು ಹರಿದುಬಂದಿದ್ದು, ಒಟ್ಟು 22.809 ಟಿಎಂಸಿ ನೀರು ಡ್ಯಾಂನಲ್ಲಿ ಶೇಖರಣೆಯಾಗಿದೆ. ನೀರಿನ ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಇನ್ನೂ 10 ದಿನಗಳಲ್ಲಿ ಡ್ಯಾಂ ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.
ಹಾರಂಗಿಯಿಂದ 30,000 ಕ್ಯೂಸೆಕ್ ನೀರು ಬಿಡುಗಡೆ: ಕೊಡಗೂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ (Cauvery River) ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಹಾರಂಗಿ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕುಶಾಲನಗರ ಸುತ್ತಮುತ್ತಲಿನ ಬಡಾವಣೆಗಳತ್ತ ಹರಿದ ನೀರು ಹರಿದು ಬಂದಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…