ಮುಂಗಾರು ಮಳೆ ಅಬ್ಬರ ಜೋರಾಗುತ್ತಿದ್ದು, ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದೆ. ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದ ಕಳೆದ 48 ಗಂಟೆಯಲ್ಲಿ 5 ಟಿಎಂಸಿಯಷ್ಟು ನೀರು ಹರಿದುಬಂದಿದ್ದು, ಬರೋಬ್ಬರಿ 100 ಅಡಿ ನೀರು ಭರ್ತಿಯಾಗಿದೆ.
124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಜಲಾಶಯ 100 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ. ಇದರಿಂದ ರೈತರು ಹರ್ಷಗೊಂಡಿದ್ದಾರೆ. ಕಳೆದ ಒಂದೂವರೆ ತಿಂಗಳಿನಿಂದ ಮಳೆಯಿಲ್ಲದೇ ಕಂಗಾಲಾಗಿದ್ದ ಸಕ್ಕರೆ ನಾಡಿನ ರೈತರು, ಇದೀಗ ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.
ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವಿದ್ದು, ಇಂದು ಇನ್ನಷ್ಟು ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್ಎಸ್ ಕಳೆದ 48 ಗಂಟೆಗಳಲ್ಲಿ 5 ಟಿಎಂಸಿ ನೀರು ಹರಿದುಬಂದಿದ್ದು, ಒಟ್ಟು 22.809 ಟಿಎಂಸಿ ನೀರು ಡ್ಯಾಂನಲ್ಲಿ ಶೇಖರಣೆಯಾಗಿದೆ. ನೀರಿನ ಒಳಹರಿವು ಇದೇ ರೀತಿ ಮುಂದುವರಿದಲ್ಲಿ ಇನ್ನೂ 10 ದಿನಗಳಲ್ಲಿ ಡ್ಯಾಂ ಪೂರ್ಣ ಭರ್ತಿಯಾಗುವ ಸಾಧ್ಯತೆಯಿದೆ.
ಹಾರಂಗಿಯಿಂದ 30,000 ಕ್ಯೂಸೆಕ್ ನೀರು ಬಿಡುಗಡೆ: ಕೊಡಗೂ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ (Cauvery River) ನೀರಿನ ಪ್ರಮಾಣ ಗಣನೀಯ ಏರಿಕೆ ಕಂಡಿದೆ. ಹಾರಂಗಿ ಜಲಾಶಯದಿಂದ 30,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕುಶಾಲನಗರ ಸುತ್ತಮುತ್ತಲಿನ ಬಡಾವಣೆಗಳತ್ತ ಹರಿದ ನೀರು ಹರಿದು ಬಂದಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…