ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಜಲಾಶಯ ಡಿಸೆಂಬರ್ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ ಭರ್ತಿಯಾಗಿ ದಾಖಲೆ ಬರೆದಿದೆ.
49.457 ಅಡಿ ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಅಣೆಕಟ್ಟೆಯಲ್ಲಿ, ಪ್ರಸ್ತುತ ಅಷ್ಟೇ ಪ್ರಮಾಣದ ನೀರಿನ ಸಂಗ್ರಹವಿದೆ. ತಮಿಳುನಾಡಿಗೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಈ ಬಾರಿ ಬಿಡಲಾಗಿದೆ. ಕೇರಳದ ಕೆಲವು ಭಾಗ, ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕೆಆರ್ಎಸ್ ಡ್ಯಾಂಗೆ ಉತ್ತಮ ಒಳಹರಿವು ಬಂದಿದೆ. ಕಳೆದ ವರ್ಷ ಅಣೆಕಟ್ಟೆಗೆ 136 ಹೊಸ ಗೇಟುಗಳನ್ನು ಅಳವಡಿಸಿದ ಪರಿಣಾಮ ನಿತ್ಯ ಪೋಲಾಗುತ್ತಿದ್ದ 1 ಸಾವಿರ ಕ್ಯುಸೆಕ್ ನೀರನ್ನು ತಡೆಗಟ್ಟಲಾಗಿದೆ.31 ಕಿಲೋಮೀಟರ್ ಉದ್ದದ ನಾಲೆಗಳ ಆಧುನೀಕರಣ ಕಾಮಗಾರಿ ಹಾಗೂ ನೀರುಗಂಟಿಗಳು ಅತ್ಯುತ್ತಮವಾಗಿ ನೀರು ನಿರ್ವಹಣೆ ಮಾಡಿರುವುದು ಸೇರಿದಂತೆ ಇತರ ಕಾರಣಗಳಿಂದಾಗಿ ಕನ್ನಂಬಾಡಿ ಅಣೆಕಟ್ಟೆಯು ಡಿಸೆಂಬರ್ ಅಂತ್ಯದಲ್ಲೂ ಭರ್ತಿಯಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…