ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಜಲಾಶಯ ಡಿಸೆಂಬರ್ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ ಭರ್ತಿಯಾಗಿ ದಾಖಲೆ ಬರೆದಿದೆ.
49.457 ಅಡಿ ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಅಣೆಕಟ್ಟೆಯಲ್ಲಿ, ಪ್ರಸ್ತುತ ಅಷ್ಟೇ ಪ್ರಮಾಣದ ನೀರಿನ ಸಂಗ್ರಹವಿದೆ. ತಮಿಳುನಾಡಿಗೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಈ ಬಾರಿ ಬಿಡಲಾಗಿದೆ. ಕೇರಳದ ಕೆಲವು ಭಾಗ, ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕೆಆರ್ಎಸ್ ಡ್ಯಾಂಗೆ ಉತ್ತಮ ಒಳಹರಿವು ಬಂದಿದೆ. ಕಳೆದ ವರ್ಷ ಅಣೆಕಟ್ಟೆಗೆ 136 ಹೊಸ ಗೇಟುಗಳನ್ನು ಅಳವಡಿಸಿದ ಪರಿಣಾಮ ನಿತ್ಯ ಪೋಲಾಗುತ್ತಿದ್ದ 1 ಸಾವಿರ ಕ್ಯುಸೆಕ್ ನೀರನ್ನು ತಡೆಗಟ್ಟಲಾಗಿದೆ.31 ಕಿಲೋಮೀಟರ್ ಉದ್ದದ ನಾಲೆಗಳ ಆಧುನೀಕರಣ ಕಾಮಗಾರಿ ಹಾಗೂ ನೀರುಗಂಟಿಗಳು ಅತ್ಯುತ್ತಮವಾಗಿ ನೀರು ನಿರ್ವಹಣೆ ಮಾಡಿರುವುದು ಸೇರಿದಂತೆ ಇತರ ಕಾರಣಗಳಿಂದಾಗಿ ಕನ್ನಂಬಾಡಿ ಅಣೆಕಟ್ಟೆಯು ಡಿಸೆಂಬರ್ ಅಂತ್ಯದಲ್ಲೂ ಭರ್ತಿಯಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…