ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಜಲಾಶಯ ಡಿಸೆಂಬರ್ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ ಭರ್ತಿಯಾಗಿ ದಾಖಲೆ ಬರೆದಿದೆ.
49.457 ಅಡಿ ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಅಣೆಕಟ್ಟೆಯಲ್ಲಿ, ಪ್ರಸ್ತುತ ಅಷ್ಟೇ ಪ್ರಮಾಣದ ನೀರಿನ ಸಂಗ್ರಹವಿದೆ. ತಮಿಳುನಾಡಿಗೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಈ ಬಾರಿ ಬಿಡಲಾಗಿದೆ. ಕೇರಳದ ಕೆಲವು ಭಾಗ, ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕೆಆರ್ಎಸ್ ಡ್ಯಾಂಗೆ ಉತ್ತಮ ಒಳಹರಿವು ಬಂದಿದೆ. ಕಳೆದ ವರ್ಷ ಅಣೆಕಟ್ಟೆಗೆ 136 ಹೊಸ ಗೇಟುಗಳನ್ನು ಅಳವಡಿಸಿದ ಪರಿಣಾಮ ನಿತ್ಯ ಪೋಲಾಗುತ್ತಿದ್ದ 1 ಸಾವಿರ ಕ್ಯುಸೆಕ್ ನೀರನ್ನು ತಡೆಗಟ್ಟಲಾಗಿದೆ.31 ಕಿಲೋಮೀಟರ್ ಉದ್ದದ ನಾಲೆಗಳ ಆಧುನೀಕರಣ ಕಾಮಗಾರಿ ಹಾಗೂ ನೀರುಗಂಟಿಗಳು ಅತ್ಯುತ್ತಮವಾಗಿ ನೀರು ನಿರ್ವಹಣೆ ಮಾಡಿರುವುದು ಸೇರಿದಂತೆ ಇತರ ಕಾರಣಗಳಿಂದಾಗಿ ಕನ್ನಂಬಾಡಿ ಅಣೆಕಟ್ಟೆಯು ಡಿಸೆಂಬರ್ ಅಂತ್ಯದಲ್ಲೂ ಭರ್ತಿಯಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…