ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಜಲಾಶಯ ಡಿಸೆಂಬರ್ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ ಭರ್ತಿಯಾಗಿ ದಾಖಲೆ ಬರೆದಿದೆ.
49.457 ಅಡಿ ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಅಣೆಕಟ್ಟೆಯಲ್ಲಿ, ಪ್ರಸ್ತುತ ಅಷ್ಟೇ ಪ್ರಮಾಣದ ನೀರಿನ ಸಂಗ್ರಹವಿದೆ. ತಮಿಳುನಾಡಿಗೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಈ ಬಾರಿ ಬಿಡಲಾಗಿದೆ. ಕೇರಳದ ಕೆಲವು ಭಾಗ, ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕೆಆರ್ಎಸ್ ಡ್ಯಾಂಗೆ ಉತ್ತಮ ಒಳಹರಿವು ಬಂದಿದೆ. ಕಳೆದ ವರ್ಷ ಅಣೆಕಟ್ಟೆಗೆ 136 ಹೊಸ ಗೇಟುಗಳನ್ನು ಅಳವಡಿಸಿದ ಪರಿಣಾಮ ನಿತ್ಯ ಪೋಲಾಗುತ್ತಿದ್ದ 1 ಸಾವಿರ ಕ್ಯುಸೆಕ್ ನೀರನ್ನು ತಡೆಗಟ್ಟಲಾಗಿದೆ.31 ಕಿಲೋಮೀಟರ್ ಉದ್ದದ ನಾಲೆಗಳ ಆಧುನೀಕರಣ ಕಾಮಗಾರಿ ಹಾಗೂ ನೀರುಗಂಟಿಗಳು ಅತ್ಯುತ್ತಮವಾಗಿ ನೀರು ನಿರ್ವಹಣೆ ಮಾಡಿರುವುದು ಸೇರಿದಂತೆ ಇತರ ಕಾರಣಗಳಿಂದಾಗಿ ಕನ್ನಂಬಾಡಿ ಅಣೆಕಟ್ಟೆಯು ಡಿಸೆಂಬರ್ ಅಂತ್ಯದಲ್ಲೂ ಭರ್ತಿಯಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…