ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

June 21, 2025
11:07 PM

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ಡ್ಯಾಂನ ಒಳ ಹರಿವು ಹೆಚ್ಚಾಗುತ್ತಿದೆ. ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.  ಕಾವೇರಿ ನದಿ ಪಾತ್ರದ ಜನರು ತಮ್ಮ ಸುರಕ್ಷತೆ ಜೊತೆಗೆ ತಮ್ಮ ಬೆಲೆ ಬಾಳುವ ವಸ್ತುಗಳನ್ನು ಸಂರಕ್ಷಿಸಿಕೊಳ್ಳುವಂತೆ ಎಚ್ಚರಿಕೆ ಸಂದೇಶ ಬಿಡುಗಡೆ ಮಾಡಿದೆ. ಕೆ.ಆರ್.ಎಸ್. ಡ್ಯಾಂನ ಇಂದಿನ ನೀರಿನ ಮಟ್ಟ 118.60 ಇದ್ದು, ಭರ್ತಿಗೆ ಕೇವಲ ಆರು ಅಡಿ ಮಾತ್ರ ಬಾಕಿ ಇದೆ.124.80 ಅಡಿಯಷ್ಟು ನೀರು ಸಂಗ್ರಹದ ಸಾಮರ್ಥ್ಯ ಹೊಂದಿರುವ ಡ್ಯಾಂಗೆ 18.387 ಒಳ ಹರಿವು ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror