ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ಡ್ಯಾಂನ ಒಳ ಹರಿವು ಹೆಚ್ಚಾಗುತ್ತಿದೆ. ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ಆಡಳಿತ ಸೂಚನೆ ನೀಡಿದೆ. ಕಾವೇರಿ ನದಿ ಪಾತ್ರದ ಜನರು ತಮ್ಮ ಸುರಕ್ಷತೆ ಜೊತೆಗೆ ತಮ್ಮ ಬೆಲೆ ಬಾಳುವ ವಸ್ತುಗಳನ್ನು ಸಂರಕ್ಷಿಸಿಕೊಳ್ಳುವಂತೆ ಎಚ್ಚರಿಕೆ ಸಂದೇಶ ಬಿಡುಗಡೆ ಮಾಡಿದೆ. ಕೆ.ಆರ್.ಎಸ್. ಡ್ಯಾಂನ ಇಂದಿನ ನೀರಿನ ಮಟ್ಟ 118.60 ಇದ್ದು, ಭರ್ತಿಗೆ ಕೇವಲ ಆರು ಅಡಿ ಮಾತ್ರ ಬಾಕಿ ಇದೆ.124.80 ಅಡಿಯಷ್ಟು ನೀರು ಸಂಗ್ರಹದ ಸಾಮರ್ಥ್ಯ ಹೊಂದಿರುವ ಡ್ಯಾಂಗೆ 18.387 ಒಳ ಹರಿವು ಇದೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…