ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ಡ್ಯಾಂನ ಒಳ ಹರಿವು ಹೆಚ್ಚಾಗುತ್ತಿದೆ. ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ಆಡಳಿತ ಸೂಚನೆ ನೀಡಿದೆ. ಕಾವೇರಿ ನದಿ ಪಾತ್ರದ ಜನರು ತಮ್ಮ ಸುರಕ್ಷತೆ ಜೊತೆಗೆ ತಮ್ಮ ಬೆಲೆ ಬಾಳುವ ವಸ್ತುಗಳನ್ನು ಸಂರಕ್ಷಿಸಿಕೊಳ್ಳುವಂತೆ ಎಚ್ಚರಿಕೆ ಸಂದೇಶ ಬಿಡುಗಡೆ ಮಾಡಿದೆ. ಕೆ.ಆರ್.ಎಸ್. ಡ್ಯಾಂನ ಇಂದಿನ ನೀರಿನ ಮಟ್ಟ 118.60 ಇದ್ದು, ಭರ್ತಿಗೆ ಕೇವಲ ಆರು ಅಡಿ ಮಾತ್ರ ಬಾಕಿ ಇದೆ.124.80 ಅಡಿಯಷ್ಟು ನೀರು ಸಂಗ್ರಹದ ಸಾಮರ್ಥ್ಯ ಹೊಂದಿರುವ ಡ್ಯಾಂಗೆ 18.387 ಒಳ ಹರಿವು ಇದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…