Advertisement
ಸುದ್ದಿಗಳು

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

Share

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣರಾಜ ಸಾಗರ ಡ್ಯಾಂನ ಒಳ ಹರಿವು ಹೆಚ್ಚಾಗುತ್ತಿದೆ. ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ಆಡಳಿತ ಸೂಚನೆ ನೀಡಿದೆ.  ಕಾವೇರಿ ನದಿ ಪಾತ್ರದ ಜನರು ತಮ್ಮ ಸುರಕ್ಷತೆ ಜೊತೆಗೆ ತಮ್ಮ ಬೆಲೆ ಬಾಳುವ ವಸ್ತುಗಳನ್ನು ಸಂರಕ್ಷಿಸಿಕೊಳ್ಳುವಂತೆ ಎಚ್ಚರಿಕೆ ಸಂದೇಶ ಬಿಡುಗಡೆ ಮಾಡಿದೆ. ಕೆ.ಆರ್.ಎಸ್. ಡ್ಯಾಂನ ಇಂದಿನ ನೀರಿನ ಮಟ್ಟ 118.60 ಇದ್ದು, ಭರ್ತಿಗೆ ಕೇವಲ ಆರು ಅಡಿ ಮಾತ್ರ ಬಾಕಿ ಇದೆ.124.80 ಅಡಿಯಷ್ಟು ನೀರು ಸಂಗ್ರಹದ ಸಾಮರ್ಥ್ಯ ಹೊಂದಿರುವ ಡ್ಯಾಂಗೆ 18.387 ಒಳ ಹರಿವು ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 hour ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

2 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

3 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

6 hours ago